ಮಾನಸ ವೀಣ

ಮಾನಸ ಲೋಕದ ಪ್ರಭುವೆ
ಮನ ಮಾನಸದ ಹೊನಲಿನ ವಿಭುವೆ ||ಪ||

ಮುಗಿಲಿಗೂ ಮಿಗಿಲು
ನಿನ್ನಯ ಹರವು,
ಕಡಲಿಗೂ ಹಿರಿದು
ತಿಳಿವಿನ ಅಳವು,

ಸಮೀರನ ಹಿಂದಿಕ್ಕೂ
ವೇಗದ ಲೀಲೆ,
ಅನಲನ ದಾಟಿಸೋ
ಅಪುವಿನ ಓಲೆ,

ಮಾಯಾ ಮೃಗದ
ನಯನದ ಮಿಂಚೊ,
ನಾನಾ ಛಾಯೆಯ
ಥಳುಕಿನ ಸಂಚೋ,

ಕಾಂತ ಕಾಂತಿಗಳ
ಏಕಾನೇಕದ ದೀಪ್ತಿ
ಕ್ರಾಂತಿಯುತ್ಕ್ರಾಂತಿಯ
ನಿಮೀಲನ ಶಕ್ತಿ

ಯುಗದ ಯಾತ್ರಿಯ
ಯಾತ್ರೆಯ ಕಿರಣ
ಜುಗದ ಧರಿತ್ರಿಯ
ಅಕ್ಷಯ ಕಾರಣ

ಮಾತನು ಮೀರಿದ
ಮೌನದ ಮನನ
ನಿಧಿನ್ಯಾಸ ಧ್ಯಾನದಿ
ನಿನ್ನಯ ದರುಶನ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚೈತ್ರ
Next post ಆಕಾಶಭಿತ್ತಿ ಮೇಲೆ

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

cheap jordans|wholesale air max|wholesale jordans|wholesale jewelry|wholesale jerseys