ಅಮೃತ ತರಂಗಿಣಿ

ಯಾವ ರಾಗ ಪಲ್ಲವಿಯ ಪದದನುಪದದನುನಯ
ಸರ ಸ್ವರದಮೃತ ಮಾನಸದನುಲಾಪದದನಾಲಯ |

ಋತು ಋತುವಿನ ಕ್ರತುವು ನೀನು,
ಬಾಳಿನೆಳೆಯ ತಂಬೆಲರವು,
ಪಥ ಪಂಥ ಪಾಂಥದ ಪಥವು ನೀನು,
ಬೆಳಗು ಬೆಳಕಿನ ಕಿರಣವು.

ನನ್ನ ಜಲಧಿಯ ತುಂಬು ಬಿಂಬವು
ನಿನ್ನ ಚಿಲುಮೆ ಬಿಂದು ಕಸವರ,
ಒಲವೊಲವಗಣ್ಣಿನ ಕನಸಬಿಂಬವು
ನಿನ್ನ ಸುಮದಧರದ ಕೇಸರ,

ನನ್ನ ಮೆತ್ತೆಯ ಮೃದು ಮೋದ ತಲ್ಪವು
ನಿನ್ನ ಕುಂಭದೆದೆಯ ತುಂಬುರ,
ಪ್ರಾಣ-ಹರಣದ ಭಾವ ಕಲ್ಪವು
ನಿನ್ನ ರತ್ನ ಗರ್ಭದ ಹಂದರ,

ಕ್ಷೀರ ದಧಿಘೃತ ಮಧು ಸವಿಯು ನೀನು
ಇಂದ್ರಿಯೊಳಿಂದ್ರಿಯದಾನಂದವು,
ಅನಂತ ತಾನನಂತದೈಸಿರಿ
ಋಷಿಗಡಣದಮರರೊಲಿಸಿದ ಶಕುತಿಯು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರೂಪಾಂತರ
Next post ಆಕಾಶದಲ್ಲಲ್ಲಿ ನಿಲ್ದಾಣಗಳಿದ್ದಿದ್ದರೆ

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

cheap jordans|wholesale air max|wholesale jordans|wholesale jewelry|wholesale jerseys