ಅಂತರಾಳ

ನಾನು ಹೆಣ್ಣು ಯುಗದ ಕಣ್ಣು
ದಾತ ದಾತನ ದಾತೆಯು,
ಮುಗಿಲಿನೆದೆಗೂ ಮಿಗಿಲು ನಾನು
ವಿಶ್ವ ಸೃಷ್ಟಿಯ ತಾಯಿಯು,
ಕಡಲ ಒಡಲಿನಾಳದಾಳ ನಾನು
ಜಗದ ಜೋಗುಳ ಗೀತೆಯು |

ಉರಿಯು ತಂಪು ತಾರಾ ಮಿಣುಪು
ಸಗ್ಗ ಋತುವಿನ ಸೋನೆಯು,
ಶೃಂಗ ಶೃಂಗದ ಶೃಂಗ ನಂದನ
ಭೃಂಗದೆದೆಯ ಮಿಡಿತವು,
ದಟ್ಟ ಝರಿ ವನ ಬನ ರಾಜಿ ನಾನು
ಧಮನಿ ಧಮನಿಗೂ ರುಧಿರವು |

ಇರದ ದೇವರನಿರವ ರೂಪಿನ
ತ್ಯಾಗ ಭೋಗ ಭಾಗ್ಯದ ಭರಣಿಯು,
ಬಿತ್ತು ಬಿತ್ತಿಗೆ ರೂಪ ರೂಹನು
ತಿದ್ದಿ ತೀಡೋ ಭ್ರೂಣ ಲತಿಕೆಯು,
ಪುರುಷ ನಿನಗೆ ಪ್ರಕೃತಿ ನಾನು
ಉಳಿವು ಬೆಳೆವಿನ ನಿಯತಿಯು |

ಅಂದು ಇಂದು ಹಿಂದೆಂದಿನಿಂದೋ
ಬಂಧ ಬಂಧದ ದಿಗ್ಭಂಧನ
ಸೃಷ್ಟಿ ದಿಟ್ಟಿಯ ಪುರುಷ ನಿನ್ನಯ
ಕೈಯಲುಗಿನೆದೆಯ ಚಂದನ
ಪಡೆದ ಕೊಸರೊಲವ ಋಣಿಯು ನಾನು
ತೆರುವ ವಡ್ಡಿ ಚಕ್ರದ ದಾಳವು |

ಆವ ಮನುವಿನ ಸ್ಮೃತಿ ವಿಸ್ಮೃತಿಯೋ
ಸೆಲೆಯ ಬಲೆಯ ಜಾಲವೊ
ಆವಕ್ಕರದಕ್ಕರಕೂ ನನ್ನ ನೆತ್ತರೆ ಶಾಯಿಯು
ವ್ಯಕ್ತಾವ್ಯಕ್ತ ಭೀತಿಯ ಛಾಯೆಯು
ಬರೆದ ಬರಹದ ಹೊಗೆಯ ಹಗೆಯ ನೀನು
ನನ್ನ ಬಸಿರ ಪ್ರಸೂತನು |

ಸುರತಿ ಸುಖದಾ ಬಯಲ ಬತ್ತಲೋ
ಹುತ್ತ ಹೊಕ್ಕ ಶುಕ್ರನ ಧಾರಿಣಿ
ವಿರತಿ ಶೃತಿಗೂ ರಾಗರತಿಯನುರಾಗಿಯು
ಒಲವ ಹೂಮಳೆ ಶೃಂಗಾರಿಣಿ
ಹುಟ್ಟು ಬೆಳೆವು ಮುಳುಗಟ್ಟು ಕಟ್ಟ ಬಟ್ಟೆ ನಾನು
ಭಾವ ಶೂನ್ಯ ಜನದೆದೆ ಜಗದಲಿ |

ಯಶದ ಯಶದಾಧಾರ ಧಾರ ತೊರೆಯು
ಯಶವಂತನಾ ಬೆನ್ನ ನೆರಳಲಿ
ಶೂದ್ರಸ್ಪುಶ್ಯ ಮೋಹ ಕಾಮಿ ಮಾಯೆಯು
ಕ್ರೂರ ಪುರುಷ ಕಲ್ಪದ ಸರಳಲಿ
ರಸದ ಜನನಕೆ ವಿರಸ ಮರಣಕೆ
ಸಮರಸದ ಬದುಕಿನ ದೀಪ ಕನ್ನಿಕೆ |
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಳಕಿನ ಹಣತೆ
Next post ಕ್ಷಮಿಸು ತಂದೆ

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

cheap jordans|wholesale air max|wholesale jordans|wholesale jewelry|wholesale jerseys