ಸಂಸರಣ

ವಿಶ್ವದಂಗಳ ತೃಣ-ತೃಣದ ಕಣವದು
ಜೀವ ಜಾಲದ ಬದುಕಿಗೆ
ನನಗೆ ನಿನಗೆಂದೆಣಿಸುವೇತಕೆ ಉರಿದು
ಬೀಳೋ ಅಸ್ಥಿಯ ಭ್ರಾಂತಿಗೆ |

ಎನಿತು ರೂಪರೂಪ ಭೇದವು
ಒಂದೇ ಜೀವದಿ ಸಮತೆಯು
ವಿಕಾಸ ದೃಷ್ಟಿಗೆ ಸೃಷ್ಟಿಗರ್ಭದ
ಮೂರ್ತ ಮೂರ್ತದ ದರುಶನ
ನವ್ಯ ನವಕೆ ಶುಭೋದಯವು
ನಿತ್ಯ ಸತ್ಯ ದಿನಪನ ಚೇತನ |

ಋತು ಚಕ್ರದ ಮಿಥುನ ಫಲವು
ಪ್ರಾಣ ಸ್ಪುರಣದುಗಮದಿರುವು
ನಾದ ಕ್ರತುವಿನನುಭಾವ ಸೌಧದ
ಜೀವ ದೇವ ಭಾವದ ಗೆಳೆತನ
ಬಂಧ ಬಂಧದ ಸೇತು ಬಂಧವು
ಸಂಸರಣ ಸಾರದ ನಂದನ |

ಹತನ ತನದಾ ಧೂರ್ತ ಕ್ರೌರ್ಯವು
ದಾನವನ ರಣದಾನನ
ಜತನ ಪಾವನ ಶೀಲ ತನವದೆ
ಹರಿಹರರ ಸಮತೆಯ ಚೇತನ
ಬಾಳ್ವೆ ಬಾಳ್ವೆಯ ಚೆಲ್ವ ಬಾಳ್ವೆಯು
ಸಗ್ಗ ಸಂವರಣದ ಸಾಧನ |
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಜಲ್
Next post ನೆನಪಿಡುವಳೆ?

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

cheap jordans|wholesale air max|wholesale jordans|wholesale jewelry|wholesale jerseys