ಪಯಣ

ಸಾಗುತಿರಲಿ ಜೀವನ ಯಾತ್ರೆ
ಎಚ್ಚರೆಚ್ಚರ ಸಿರಿ ಬೆಳಕಲಿ
ಅಲ್ಲೊ, ಇಲ್ಲೊ, ಎಲ್ಲೋ ಮುಗ್ಗರಿಸದೆ
ಮನ-‘ಮನ’ವ ಕೈಯ ಹಿಡಿಯಲಿ |

ನೀನೆ ನಿನ್ನಯ ದಾರಿ ಬೆಳಕು
ಸಾಗು ಒಳ ಬೆಳಕಿನ ಪಥದಲಿ
ನಿನ್ನರಿವೆ ತಾನದು ಹೊನ್ನ ದೀವಿಗೆ
ಮರವೆ ತಾರದೆ ಜೊತೆ ಸೇರಲಿ |

ದೇವ ದೇವರಿರವಿನರಿವಿಗೆ
ನೀನೆ ನಿನ್ನಯ ಆಲಯ
ಸಮತೆ ಸಮರಸ ಶಾಂತ ಕ್ಷಮತೆಗೆ
ನಡೆ ನುಡಿಯೇ ಶೃತಿಲಯ |

ಮೇಲು ಕೀಳಿನ ಸೋಂಕ ಕಾಣದೆ
ಸ್ವಸ್ಥವಿರಲೆದೆ ಬಾಂದಳ
ಸ್ವಾರ್ಥ, ಕ್ರೌರ್ಯ, ದ್ವೇಷದೆದೆಗೂ
ಕಣ್ಣ ತೆರೆಸಲಿ ಪ್ರೀತಿ ಜೋಗುಳ |
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಾಯ್ಕಗಳು
Next post ಮಳೆರಾಜ ಬಂದಾನು

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

cheap jordans|wholesale air max|wholesale jordans|wholesale jewelry|wholesale jerseys