ಅಂತರ್ದರ್ಶನ

ಭಾವ ರವಿಯೆ ಶಮ ಶಾಂತ ಶಶಿಯೆ
ನಿನ್ನ ನೋಟ ದಾಳವೆತ್ತರ ನಿಲುಕದು

ಕಸವೊಽ ರಸವೊಽ
ಸರಸ ವಿರಸವೊಽ
ನಿನ್ನ ನೋಟದಿ ಸಮರಸ

ಮುಗಿಲಿನೆದೆಗೂ ಮಣ್ಣ ವಾಸನೆ
ತೋರೋ ನಿನ್ನಯ ಗಾರುಡಿ
ಕಡಲ ತೆರೆಯ ನೊರೆಯ ತೊರೆಗೊ
ಕಣ್ಣೀರ ಛಾಯೆಯ ಮುನ್ನುಡಿ

ಬೀಸೊ ಗಾಳಿಗೂ ಭಾವ ಸಾಸಿರ
ಜೀವ ಜಲಕು ಒನಪಿನೋಗರ
ಪಂಕ್ತಿಯಲ್ಲೂ ಜಂಗಮದ ದರ್ಶನ
ಖಗ-ಮಿಗ-ಜಂತುಗಳಲೂ ನೇಹದ ಸ್ಪರ್ಶನಾಽ

ಹೆಪ್ಪುಗಟ್ಟಿ ಕರಗೊ ತುಹಿನವು
ನಿನ್ನ ಕಣ್ಣ ಕರಣಕೆ ಕಾರಣ
ವೈಶಾಖ, ವರ್ಷಿಣಿ, ಹಿಮಂತ ಸಾಲ್ಗಳು
ಪದ ಪಾದದಕ್ಕರ ತೋರಣ.

ಹುಟ್ಟು ಸಾವು ನೋವು ನಲಿವು
ನಿನಗಾತ್ಮಾನಂದದ ಸಂತಸ
ದೃಷ್ಟಿಯಂತರದೃಷ್ಟಿಯು
ನಿನ್ನ ಚಿತ್ತದೊಲ್ಮೆ ಬಲ್ಮೆಯ ನವರಸ

ಬಯಲ ಜಗದ ಬಯಲಗಣ್ಣಿಗೆ
ಬಯಲೆ ನೂಪುರದಾಲಯ
ಕವಿಯೆ ನಿನ್ನಯ ಕಾವ್ಯಗಣ್ಣಲಿ
ಬಯಲು ಬಯಲಿಗೂ ಶೃತಿಲಯ…..
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಲ್ಲಮ
Next post ಅಮರಾವತಿ

ಸಣ್ಣ ಕತೆ

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

cheap jordans|wholesale air max|wholesale jordans|wholesale jewelry|wholesale jerseys