ಅಕ್ಕನ ಭಾವಗೀತೆ

ಕೆಳದಿ ಕೇಳೆನ್ನೊಲವಿನಾ ಗಾಥೆಯ
ಕಣ್ಣದೀಪ್ತಿಯಿನಿಯನೊಲಿಸಿದಾ ಪರಿಯ

ಮೂಡಲದರುಣಗಿರಿ,
ಪಡುವಲದ ಶಶಿಶಿಖರ,
ಪಂಚ ಭೂತಗಳಲೆಲ್ಲ….. ನನಗೊಲಿದವನ ರೂಹು,
ಲತೆ ಲತೆಗಳಲರಲರು,
ಸುಮ ಸುಮದ ಘಮದಲ್ಲಿ,
ಸೊಗಸ ಕನಸಿನಿನಿಯನ…. ರೂಪ…. ತೇಜರಾಸಿ….

ಚಿತ್ರ-ಚಿತ್ತಾರವರಿತಂತೆ,
ಗೇಹ ಬೆಳೆ-ಬೆಳೆದಂತೆ,
ಮಾಗಿ ಮಾಗಿತು ಒಳಗೆ ಪ್ರೇಮ ಪಲ್ಲವಿಯ ಫಲವು,
ಕ್ಷಣ-ಚಣವು ಉನ್ಮಾದ,
ಆನಂದದಾನಂದ ಲೀಲೆಯಲಿ,
ಮನತುಡುಕುವೆಡೆಯಲ್ಲಿ ಮಲ್ಲಿಕಾರ್ಜುನ ನಿರವು.

ಬಯಲಿಗರ ಬನದೊಳಗೆ,
ಬಯಲಾದ ಮನದೊಳಗೆ,
ಬಯಲ ಕೈ ಹಿಡಿದೆ ನಾ ಬಾಳ ಬಂಡಿಯಲಿ
ಅನುಭವದನುಭಾವಿ
ವಚನ-ವಚನಗಳೊಲ್ಲರಿಯ
ಇನಿಯನಿನಿಯನ ನಿಜ ಭಾವಗೀತೆ ರಾಗದಲಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನ್ನ ಪತ್ರ
Next post ಶಾಂತಿಗಾಗಿ

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

cheap jordans|wholesale air max|wholesale jordans|wholesale jewelry|wholesale jerseys