ಕನ್ನಡಾಂಬೆಯ ಹಂಬಲ

ಏಕೀಕರಣದ ಪೂರ್ವದಲ್ಲಿ ಬರೆದ ಕವನ


ಒಂದಿರುಳ ಕನಸಿನಲಿ
ಕನ್ನಡಮ್ಮನ ಕೇಳಿದೆನು
‘ಬೇಕು ನಿನಗೇನು ಎಂದೂ’


ಪೌರ್ಣಿಮೆಯ ಚಂದ್ರನಿಗೆ
ಕಲೆಯ ತೆರದೀ ನನಗೆ
ಒಡೆದ ಕರ್ನಾಟಕದ ಕುಂದು ಎಂದೂ


ಕೋಡಿಯೊಡೆದಿಹ ಕಣ್ಣೀರು
ಹೊಳೆಯಾಗಿ ಬಿಡದೆ ಸುರಿಸಿ
ಮನಬಿಚ್ಚಿ ಮೊರೆಬಿದ್ದಳೆನಗೆ


ಹುಲಿಯ ಬಾಯಿಗೆ ಬಿದ್ದು
ಕೊರಗಿ ಕಿರುಚುತಲಿರುವ
ಕರುವಿನಾ ತೆರದಿ ಕೂಗಿದಳೆನಗೆ


‘ಸುತ್ತೆಲ್ಲಾ ಸವಿಹಣ್ಣು
ತುಂಬಿ ತುಳುಕಿದರೇನು?
ಹೊನ್ನಿನಾ ಸಂಕಲೆಯು ಸುತ್ತಿಹುದೆಂದೂ


ನನಗೊಂದೇ ವಚನವು ಬೇಕು
ಏಕೀಕರಣವು ಬೇಕು
ನಿಮ್ಮೆಲ್ಲರ ತ್ಯಾಗ ಸಾಹಸ ಬೇಕು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಈರುಳ್ಳಿ
Next post ಸಿಸೇರಿಯನ್

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

cheap jordans|wholesale air max|wholesale jordans|wholesale jewelry|wholesale jerseys