ಕೆಂಡದ ಚಂಡು!

ಚಿಗುರಿದಾ ಹುಲ್ಲಲ್ಲಿ; ಚಲುವಿನಾ ಓಟದಲಿ
ಆಡುತಲಿ ಸುಳಿಸುಳಿವ ಓ ನಿಲ್ಲು ಹಾವೇ !
ನಿನ್ನ ಅಂದವೇನು ಬಣ್ಣ ಮಿಂಚುವ ನಿಲವಿನಲಿ
ವಿಷಹೊತ್ತ ಹೆಡೆಯೇ ನಿನ್ನ ಗೆಲುವಿನ ಠೀವೆ!

ತಡೆ ಇನ್ನೂ ಕ್ಷಣವನ್ನು ಮಿನುಗು ಮಿಂಚೆ
ನಾಕದಿಂ ಭುವಿಗೊಗೆದ ಬೆಳ್ಳಿಯೂ ಛಡಿಯೆ
ನಿನ್ನ ನೋಡಲು ನಿಂತಿಹೆನು ದಿಗಂತದಾಚೆ
ಹಾ! ಬೆಳ್ಳಿ ರೂಪದ ನೀನೊಂದು ಕಿಡಿಯೆ!!

ಎನಿತು ಅಂದದ ಗೊಂಬೆ, ಬೆಲೆ ಏನೊ!
ಚಂದ ವರ್ಣ ಸುವರ್ಣದಿರಬಹುದೆ ಎಂದೆ
ಎಲ್ಲ ಎಳೆಯರ ಕಣ್ಣು ಎಳೆದಿಹುದೇನೊ!!
ಕರಚಾಚಿ ನಾ ಹಿಡಿದೆ, ಓ ಕಿಟ್ಟದಾ ಗೊಂಬೆ!

ನಿಲ್ಲು ನೋಡುವೆನೆಂದೆ ಮೂಡಣದ ರವಿಗೆ
ಗಿರಿಶೃಂಗವೃಂದದಲಿ ಮೂಡುವೊಡೆ ಅವಗೆ
ಎನಿತು ಚಂದದ ಚಂಡು ಅಂದೆ ಭಾಸ್ಕರಗೆ
ಮೇಲೇರಿ ನಿಂದಾಗ; ಚಂಡಲ್ಲ ಕೆಂಡನೆಂದೆನವಗೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಿಸಿ ನೀರು
Next post ನಿರಪರಾಧಿ

ಸಣ್ಣ ಕತೆ

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

cheap jordans|wholesale air max|wholesale jordans|wholesale jewelry|wholesale jerseys