ಗಝಲ್

ಈ ಸಂಜಿ ಈ ರಾತ್ರಿ ಬಂದೇ ಬರುವಿಯೆಂದು ಕಾದೆ
ಮೌನದ ಬೆಳದಿಂಗಳು ಸುಮಧುರಯಾತನೆ ಏಕಾಂಗಿ

ಏನಿದು ಕಾತುರ ಏನಿದು ಬೇಸರ ಎಂತಿಷ್ಟೋ ಉಸಿರು
ಬಾಗಿಲು ತೆರೆದಿದೆ ತೋರಣ ಕರೆದಿದೆ ಬಾಬಾ ಎಂದು

ಅದರುವ ತುಟಿಗಳು ಕಂಬನಿ ಕಣ್ಣುಗಳು ಕಾದಿವೆ
ಜಾರುಗೊಡುವುದಿಲ್ಲ ಈ ಹನಿಗಳನು ಬತ್ತಿಸುವುದಿಲ್ಲ ತುಟಿ

ವಸಂತ ಗಿಡಗಿಡಕೆಲ್ಲ ಆಕ್ರಮಿಸಿ ಜೀಕಾಡಿ ಹರೆನಗುವಾಗ
ನೀನಲ್ಲಿ ಆ ಊರಲ್ಲಿ ಅರ್ಥವಿಲ್ಲದ ರಾತ್ರಿಗಳೊಂದಿಗೆ

ಚಂದ್ರ ಇಣುಕದಂತೆ ಗಾಳಿನೂಕಿ ಮನಕುಗ್ಗದಂತೆ
ಕಿಟಕಿ ಹಾಕಿ ಪರದೆ ಎಳೆದು ದೀಪಸಣ್ಣಾಗಿಸಿ ಒರಗಿರುವೆ

ಭರವಸೆಯೊಳಗೆ ಕನಸು ಕಟ್ಟಿಸಿ ಬರುವಾಗ ಬೇಕೆಂದಿದ್ದೇನು
ಒಗಟಾಗಿಸುತಿರುವೆ ಈ ಚಳಿರಾತ್ರಿಯ ನನಸುಗಳನು

ಬೆಳಕಾಯಿತು, ಹೂವಾಡಗಿತ್ತಿಯ ಮತ್ತೊಂದು ಮಾಲೆ, ರಂಗೋಲಿ ನಗು
ತುಟಿ ಬತ್ತಿ ಕಂಬನಿ ಉದುರಿವೆ ಮೈಮನ ಉರಿದಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಾಂಧೀಜಿಗೆ
Next post ಲಿಂಗಮ್ಮನ ವಚನಗಳು – ೨೯

ಸಣ್ಣ ಕತೆ

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

cheap jordans|wholesale air max|wholesale jordans|wholesale jewelry|wholesale jerseys