ಹಗಲಿದೊ ಮುಗಿಯುತ ಬಂತು

ಸಂಧ್ಯಾ ರಾಣಿಯು ಸುಂದರ ಸ್ವಾಗತ
ನೀಡಿರಲದ ಕೈಕೊಳ್ಳಲು ಸರಿಯುತ
ಉರಿಗಣ್ಣಿನ ರವಿ ಪಶ್ಚಿಮವರಸುತ
ಕಾತರದಾತುರದಲಿ ಮುನ್ನಡೆದಿರೆ
ಹಗಲಿದೊ ಮುಗಿಯುತ ಬಂತು!

ಮನೆಯಲಿ ಮಡದಿಯು ಕಾದಿಹ ಕಾತರ
ತೊದಲು ಕಂದರಾಲಿಂಗನದಾತುರ
ಜನರೆದೆ ತುಂಬಿರೆ ದಾರಿಯ ಸರಸರ
ತುಳಿದಿವೆ ಕಾಲುಗಳವಸರದಿಂದಲಿ
ಹಗಲಿದೊ ಮುಗಿಯುತ ಬಂತು!

ಹಗಲೆಲ್ಲವು ಎದೆರಕ್ತವ ಬಸಿದಿಹ
ಬಾಳಿಗೆ ದುಡಿವವ, ಅದೋ ನಡೆಯುತಲಿಹ
ಒಲವಿನ ಬಿಸಿಯೂಟವ ಕನವರಿಸಿಹ
ಕಾಲಿನ ಚಟಪಟ ವೇಗವೇರುತಿದೆ
ಹಗಲಿದೊ ಮುಗಿಯುತ ಬಂತು!

ಜಗ ಜವದಲಿ ನಡೆದಿದೆ ಮನೆಯೆಡೆ
ಕಂಡ ಕನಸು ನೀಡುವ ಒಲವಿನ ಎಡೆ
ಉಂಡು ನಿದ್ರಿಸುತೆ, ಸಂತಸವನು ಪಡೆ-
ವಾಸೆಯ ಸಿಡಿತದಿ ರಾಗವೇಗದಲಿ
ಹಗಲಿದೊ ಮುಗಿಯುತ ಬಂತು!

ಹೃದಯದ ನೋವಿದೋ ಕಾಲನಡಿಗೆಯನು
ತಡೆದಿದೆ, ಏತಕೆ ಸಾಗುವೆ ನೀನು ?
ನಿನ್ನುಷೆಯಿಲ್ಲದೊಡೆಂತಿರಲೇನು ?
ಇರುಳು ಮುತ್ತಿದರು, ನಡೆ, ಮೆಲ್ಲನೆ ನಡೆ
ಎನುತಿರೆ-
ಹಗಲಿದೊ ಮುಗಿಯುತ ಬಂತು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೂಬೂನ ಬಾಳು
Next post ಸ್ವಗತ

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

cheap jordans|wholesale air max|wholesale jordans|wholesale jewelry|wholesale jerseys