ಮಲಗು ಮಲಗೆನ್ನೆದೆಯ ಮಂಟಪದ ಮೂರ್ತಿ

ಮಲಗು ಮಲಗೆನ್ನೆದೆಯ ಮಂಟಪದ ಮೂರ್ತಿ
ಮುಗಿಲಿನಲಿ ಮೋಡಗಳು ಕೂಡುತಿವೆ ಭರದಿ!

ಜಗದ ಕೊನೆಯನು ತಂದ ದೂತರಂತೆ
ಪ್ರಳಯ ರುದ್ರನ ಅಂಶ ತಾಳ್ದರಂತೆ
ಗುಡುಗು ಸಿಡಿಲುಗಳೆರಗಿ ಜಗವ ನಡುಗಿಸುತಿಹವು.
ನೀನೇಳಬೇಡ, ಮಗು, ಉಷೆಯೆ ಮಲಗಿನ್ನು!

ನಾಳೆಯಂತೊ ಏನೊ ಎಂಬುದೇತಕೆ ಚಿಂತೆ?
ಬಾಳು ಎಂತೋ ಏಕೋ, ಬರಿಯ ಬಯಕೆಯ ಬೊಂತೆ!
ನಂದುತಿಹ ನನ್ನದೆಯ ನೋವ ನೀ ಕಾಣದಿರು
ಈಗೇಳಬೇಡ, ಮಗು, ಉಷೆಯೆ ಮಲಗಿನ್ನು?

ಹೊಂಗನಸುಗಳು ಬಂದು ನಿನ್ನ ಮುತ್ತಿಡುತಿರಲಿ,
ಆ ಮುತ್ತುಗಳೆನ್ನ ಮುತ್ತು ಮಾಸದೆ ಇರಲಿ.
ಈ ಜಗದ ಕೊರತೆಯ ನನಸದನು ತಾಗದೊಲು
ಏಳದಿರು ಮುದ್ದು ಮಗು, ಉಷೆಯೆ ಮಲಗಿನ್ನು!

ನಾನಿನ್ನ ಜಗದೊಳಗೆ ಮುಂದೊಮ್ಮೆ ಬಂದಾಗ
ನಿನ್ನೊಲವ ಬೆಳಕ ರವಿ ಹೃದಯದಲಿ ಸುಳಿದಾಗ
ನೀನೇಳು ನನ್ನ ಮಣಿ, ಎದೆಯ ಹಗಲಿನ ರಾಗ,
ಆಗ ಕಣ್ತೆರೆ, ಈಗ ಉಷೆಯೆ, ಮಲಗಿನ್ನು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರೋಪ – ೫
Next post ಹಾಯ್ಕಗಳು

ಸಣ್ಣ ಕತೆ

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

cheap jordans|wholesale air max|wholesale jordans|wholesale jewelry|wholesale jerseys