ಭತ್ತದ ಕಣಜದೊಳಗೆ ನುಸಿ
ಈಜಾಡಿ ತಿಂದು ತೇಗಿ ಸಿಪ್ಪೆ ಬೀಸಾಡಿದಂತೆ
ಸೋಮು,
ನೀನೂ ಅಕ್ಷರದ ಕಣಜದೊಳಗೆ ಈಜಾಡು
ಬಿಡದೇ ಅಕ್ಷರ ಅಕ್ಷರ ತಿನ್ನು
ತೇಗಾಡುವಷ್ಟು ಓದು ಅರಗಿಸಿಕೋ
ಹೊಸ ಹೊಸ ಆಯಾಮಗಳ, ಸಮನ್ವಯಗಳ
ಸಂವೇದನೆಗೆ ಸ್ಪಂದಿಸು,
ಕಾಲಡಿಯಲ್ಲಿಯೇ ವಿಜ್ಞಾನ ತಂತ್ರಜ್ಞಾನಗಳ
ಸಂವೇದನೆಗಳಿಗೆ ಮಿತಿ ಇಲ್ಲ
ಕೊರಡು ಕೊನರುವದು
ಕಲ್ಲು ಕವಿತೆ ಹಾಡುವುದು
ಮುಳ್ಳು ಹೂವಾಗಿ ಅರಳುವುದು
ಭಾವನೆಗೆ ಬೇಲಿ ಬೇಡ
ನದಿಗೆ ಒಡ್ಡು ಬೇಡ
ಆಕಾಶಕ್ಕೆ ಏಣಿ ಬೇಡ
ಸಮುದ್ರಕ್ಕೆ ಸೇತುವೆ ಬೇಡವೇ ಬೇಡ.
(ಸಾಕ್ಷರತಾ ಕವನ)
*****
Related Post
ಸಣ್ಣ ಕತೆ
-
ಒಂಟಿ ತೆಪ್ಪ
ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ಕೊಳಲು ಉಳಿದಿದೆ
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…
-
ಗಿಣಿಯ ಸಾಕ್ಷಿ
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…
-
ವಲಯ
ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…