ಓ ಬೆಂಕಿ! ಸಾಗರದ ನೂರ್ಲಕ್ಷ ಅಲೆಗಳಿಗೆ
ಬೆಂಕಿ ಹೊತ್ತಿಸಿದಂತೆ ಕೆನ್ನಾಲಗೆಯನೆತ್ತಿ
ಹೊರಳಿಸಿದೆ! ಈಗಿನ್ನು – ಕಳೆದಿಲ್ಲ ಅರೆಗಳಿಗೆ!-
ದಡದ ಮರಳಿನ ಅಮಿತ ಸೇನೆಯನು ಹಿಂದೊತ್ತಿ,
ತಡಿಯೆಲ್ಲ ತನಗೆಂದು, ಮುನ್ಮುಂದೆ ಒತ್ತೊತ್ತಿ,
ಮೇಲೇರಿ, ಗರ್ಜಿಸುತ, ನೀಲಿಮಯ ಆಗಸಕೆ
ಸಾರಿ ತನ್ನದೆಯಾಸೆ, ಕೆರಳಿ, ತಡಿಯನು ಮುತ್ತಿ
ನೊರೆಯಾಗಿ ಹರಿದಾಡಿ, ಮುರಿದಿರಲು ಮನದೆಣಿಕೆ
ಹಿಂದೋಡಿ, ಮಗುದೊಮ್ಮೆ ಮೈಲಿಯತ್ತರದೊಂದು
ಹಾವಿನಾಕಾರದಿಂ ಬಂದು ಹೆದರಿಸಹೊರಟು
ದಡದೆಡೆಗೆ ಸರಿದಂತೆ, ಹೆಡೆ ಭೂಮಿಗಿಳಿತಂದು
ಬರಿಯ ಅಡಿ ನೀರಾಗಿ, ಎದೆಯಾಸೆ ಸುಳಿಮುರುಟು
ಸಸಿಯಾಗಿ- ದ್ವೇಷದಿಂ, ಕೋಪದಿಂ, ಉರಿಹತ್ತಿ,
ಸಾಗರವು ಉರಿಯುತಿದೆ-ಕಂಪಲೆಯ ಉರಿಬತ್ತಿ!
*****
Related Post
ಸಣ್ಣ ಕತೆ
-
ಒಂದು ಹಿಡಿ ಪ್ರೀತಿ
ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…
-
ನಿರಾಳ
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…
-
ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
-
ನಂಟಿನ ಕೊನೆಯ ಬಲ್ಲವರಾರು?
ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…
-
ಗಂಗೆ ಅಳೆದ ಗಂಗಮ್ಮ
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…