ಕಾರಂಜಿ ಕೆರೆಯ ಬಳಿ

ಗಾಳಿಯಲ್ಲಾವುದೋ ಕೋಗಿಲೆಯು ತನ್ನದೆಯ
ಅಳಲ ತೇಲಿಬಿಡುತ್ತಿದೆ. ದೂರದಲಿ ನೀಲಿಮೆಯ
ಆಗಸದಿಂದೊಂದು ಬಿಳಿಯನ್ನು ಸಿಡಿದಂತೆ
ನಕ್ಷತ್ರ ಮೂಡುತಿರೆ, ಮೂಡಲೋ ಬೇಡವೋ
ಎನುತ ಚಿಂತಿಸುತೊಂದು ಎಳತಾರೆ ಕತ್ತಲಲಿ
ಬೆದರಿ ಹೊದ್ದಿದೆ ಮುಸುಕು ! ಕಾರಂಜಿ ಕೆರೆಯಲ್ಲಿ
ಅಲಗುವುದೊ, ಮಲಗಿಹುದೊ, ಎನುವಂತೆ ಸುಳಿಯುತಿಹ
ಮೆಲ್ಲಲೆಗಳಾಳದಲಿ ನೆರಳುಗಳು ನಡುಗುತಿವೆ!
ಅವು ತೊಟ್ಟ ನೀರಂಗಿಯಲಿ ಕಾಲ ಮಾಡಿಟ್ಟ
ಹರುಕಿನಲಿ, ತಾರೆಗಳ ಛಾಯೆ ಅಲ್ಲಲ್ಲಿರಲು,
ದೂರದಲಿ, ಮೂಡಲಕೆ, ಕಂಬವೊಂದರ ಮೇಲೆ
ಮಂಕಡರಿ ಮಿಣುಕುತಿಹ ದೀಪದರೆನೆರಳೊಂದು
ಅಲೆಗಳಾಳದ ಇರುಳ ಭೇದಿಸುತ ಅತ್ತಿತ್ತ
ಒಸರುತಿದೆ. ಆ ಮೂಲೆಯೊಳಗೊಂದು ಬೆಳ್ವಕ್ಕಿ
ನೀರೊಳಗ ಮೀನುಗಳ ಸಂಸಾರವನು ಹೊಂಚಿ
ಕಾಯುತಿದೆ. ಇತ್ತ ಮೃಗಶಾಲೆಯಲಿ, ಬಂಧನದ
ಕೂಳನುಣ್ಣುತ ಮರುಗಿ, ಬಿಡುಗಡೆಗೆ ಹಂಬಲಿಸಿ,
ಒಲ್ಲದೆಯೆ ಬಲ್ಲಿದರ ಬಿಲ್ಗಳಿಗೆ ನೇಣಾಗಿ,
ಕಾತರದಿ, ಸಂಕಟದಿ, ಇರುಳಲೇ ನರಳುತಿಹ
ಹಾರು ಹಕ್ಕಿಗಳೆದೆಯ ಕೊರಗ ದನಿಯೊಳು ದನಿಯ
ಕೂಡಿಸಿವೆ ಕಾಡ ಹುಲಿ ಸಿಂಹಗಳು, ಅದ ಕೇಳಿ
ಮಾರುದನಿ, ಆ ಕಡೆಗೆ, ಮಾನವನ ಮುಗಿಲಾಸೆ
ಬಿಂಬಿಸುತ, ಚಾಮುಂಡಿ ಬೆಟ್ಟ ನೆಟ್ಟನೆ ನಿಂತು
ಮುಗಿಲಿಗೀಟಿಯ ಹಾಕಲೆನುವಂತೆ ನಿಮಿರಿಹುದ
ಕಂಡು ಹಿಂದೆಗೆಯುತಿದೆ; ಮೌನಕ್ಕೆ ಶರಣಾಗಿ
ನೀರಿನಲ್ಲಿ ಮುಳುಗುತಿದೆ, ನೀರ ಪಕ್ಕದ ಹಾದಿ
ತುಳಿಯುತಿಹ ಗೆಳಯರಗೊ, ಕತ್ತಲಲಿ ಬರಿಯೆರಡು
ನೆರಳಾಗಿ ಸರಿದಿಹರು. ಅವರಲೊಬ್ಬನ ದನಿಯ
ಹೆಣ್ತನದ ಮಾಧುರ್ಯ, ಅಳಿದ ಬಾಳಿನ ಒಂದು
ಸವಿಗನಸ ನನಸಂತೆ, ಹೃದಯದೊಳ ಇಂಚರದಿ
ಹಾಸು ಹೊಕ್ಕಾಗುತಿರೆ, ಮೈ ಮನಸು ಮೇಲೇರಿ
ಆಗಸದ ಮಡಿಲಿನಲಿ ಉಯಾಲೆಯಾಡುತಿಹ
ಬಿಳಿ ಮೋಡದೊಳಗೊಂದು ಕಣವಾಗಿ ಇಣುಕುತಿದೆ.
ಕೇಳುತಿದೆ- ಸ್ವರ್ಗದೊಳಗಿಂತು ಆತ್ಮೀಯತೆಯ,
ಗೆಳೆತನದ, ನೆನಪುಗಳ, ಪ್ರೇಮದುನ್ಮಾದಗಳ
ನೋವು ನಲೆಗಳುಂಟೆ ?- ಇಲ್ಲಿರಲು ಅಲ್ಲೆಲ್ಲಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಮ್ಮ
Next post ಈ ರಾತ್ರಿ

ಸಣ್ಣ ಕತೆ

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

cheap jordans|wholesale air max|wholesale jordans|wholesale jewelry|wholesale jerseys