ಏಳೆನ್ನ ಮನದನ್ನೆ

ಏಳೆನ್ನ ಮನದನ್ನೆ, ಏಳು ಚೆನ್ನಿಗ ಕನ್ನೆ
ಏಳು ಮೂಡಲ ಕೆನ್ನೆ ಕೆಂಪಾಯಿತು.
ಬಾಳ ಬೃಂದಾವನದಿ, ನಾಳೆಯೊಲವಿನ ರವದಿ,
ಆಸೆ ಮರೆಯುತಲಿಹುದು ಕಳೆದ ನಿನ್ನೆ!

ಕೊಳದ ನೀರಲಿ ಶಾಂತಿ ಮೂಡಿಹುದು, ರವಿ ಕಾಂತಿ
ಬೆಳ್ಳಿಯಲೆಗಳ ಭ್ರಾಂತಿ ಹೊಳೆಯುತಿಹುದು.
ತೀಡುತಿಹ ತಂಗಾಳಿ ಮಿಡಿಸದಿದೆ ಅಲೆಯೋಳಿ,
ಇಂತಿರಲು ಕಮಲಕಳಿ ನಡುಗುತಿಹುದು!

ಬಿರಿದ ಹೂವಿನೊಳೊಂದು ದುಂಬಿ ಇರುಳಲಿ ಬಂದು
ಒಲವಿನಲಿ ಮನ ನಿಂದು ಇರುಳನೆಲ್ಲ
ಕಮಲದಲಿ ಸೆರೆಯಾಗಿ, ಹೊರ ಜಗಕೆ ಮರೆಯಾಗಿ,
ನಡುಗಿಸಿದೆ ಹುಚ್ಚಾಗಿ ದಳವನೆಲ್ಲ!

ಅಂತೆ ನಿನ್ನೊಲವಿನಲಿ ನನ್ನೆದೆಯ ಗೀತದುಲಿ
ಶೃಂಗಾರದಳಗಳಲಿ ಸೆರೆಗೆ ಸಿಕ್ಕಿ,
ನಿನ್ನ ಬೇಡುತಲಿಹುದು, ತನ್ನ ನೀಡುತಲಿಹುದು.
ಎದ್ದೇಳು ಕಣ್ಣಮಣಿ, ನಿದ್ದೆ ಮಿಕ್ಕಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವರ
Next post ಹುಟ್ಟು

ಸಣ್ಣ ಕತೆ

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

cheap jordans|wholesale air max|wholesale jordans|wholesale jewelry|wholesale jerseys