ಕಾಂಡವಿಲ್ಲದ ಮೇಲೆ

ಅಗುಳಿ ಕಿತ್ತಿಹ ಕದಕೆ
ರಕ್ಷೆ ನೀಡುವ ಧೈರ್ಯ
ಎಲ್ಲಿಂದ ಬರಬಹುದು
ಹೇಳು ಗೆಳೆಯ,
ಕಂಡ ಕಂಡಲ್ಲೆಲ್ಲಾ ಕೊರೆದ
ಕಾಂಡವ ಕಂಡೆ, ಮತ್ತೆ ಬುಡಮೇಲು
ಮರದ ಸಹಿತ.
ಮಾರುಮಾರಿಗೂ ಮಂದಿ
ಸೇರಿಹರು ಜೋಡಿಸಲು
ಮರಮುಟ್ಟು, ಒಣಸೀಳು
ಸಿಗಬಹುದೇ, ಎಂದು
ನೀರ ಕಾಯಿಸಿ ಬಿಸಿ ನೀರ
ಮೀಯಲು ಮೈನೋವು
ತಣಿಯುವುದು ಎಂದು ತಿಳಿದು
ಗೊತ್ತಿಲ್ಲ, ನಾಳೆ ಕುಡಿಯಲು
ನೀರಿಲ್ಲ, ಒಣಭೂಮಿ,
ಬರಡು ನೆಲ ಮತ್ತೆ ಜೊತೆಗಾರ
ಸೊಳ್ಳೆ, ತಿಗಣಿ
ತರುವಾಯ ತಡಿ ಮರುಳೇ,
ಅಷ್ಟಾಂಗವಕ್ರರು ತಾಯಗರ್ಭವ
ಸೀಳಿ ತಲೆಮಾರು ತಂತುಗಳು
ಬರಬಹುದು ನಾಳೆ
ಕಾಯುತಿದೆ ಕಾರ್ಕೋಟಕ
ಮೈಯೆಲ್ಲ ಉರಿನವೆಯ
ಬೆಂಕಿ ಎದ್ದು
ಮನುಜ ಮನುಜನ
ಮುಕ್ಕಿ ಹುರಿದು ತಿಂದು
ಹರವಾದ ದಾರಿಯಲಿ
ಹದವಾದ ಹುರುಪಿನಲಿ
ಅಭಿವೃದ್ಧಿ ಹೆಸರಿನಲಿ
ನಡೆಯುತಿದೆ ನಾಶ
ಗಿಡದ ಮರವೇರಿ
ಬುಡ ಕಡಿದ ಪೆದ್ದ
ಪಡದೇ ಇರನು ವಿಷಾದ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಡುಗಿ ಮತ್ತು ದಾಸವಾಳ
Next post ಶನಿವಾರ ಸಂತೆ: ರೆಡಿಂಗ್

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

cheap jordans|wholesale air max|wholesale jordans|wholesale jewelry|wholesale jerseys