ಹಬ್ಬ

ಹುಟ್ಟೂರು
ಹೆತ್ತವರು, ಒಡಹುಟ್ಟಿದವರು, ನೆಂಟರಿಷ್ಟರ ಬಗ್ಗೆ ಮಾತಾಡುವಾಗ
ಹೊಟ್ಟೆ ತುಂಬಿದಂತಾಗುತ್ತೆ
ಹಿಟ್ಟು ಕಾರವನ್ನೇ ತಿಂದರೂ
ಒಂದ್ಸಾರಿ ನೋಡಿಕೊಂಡು ಬರಬೇಕೆನಿಸುತ್ತೆ
ಯಾವ ಕಾಲನೂ ಹೇಳಬೇಡ ಮಹಾನವಮಿ ಕಾಲವೊಂದು
ಬಿಟ್ಟ ಮೇಲೆ

ದಿಣ್ಣೆ, ದೀಪಾಂತರ ತುಂಬಾ
ಆಸೆಯೆ ಆಕಾರ ತಳೆದಂತೆ ಬೆಳೆದ
ಹೂಪೀಸು, ವಡೆತಲೆಯ ಫಲ ಪೈರು
ಗಾಳಿಗೆ ತೊನೆದಾಡುತ್ತಿರುವಾಗ
ಬಯಲಾದ ಬಯಲೆಲ್ಲಾ ಸಂಗೀತ ನೃತ್ಯದಲ್ಲಿ ತೇಲುವುದು,

ದೊಡ್ಡವಳು ತಾಯಿ ಗಂಗಮ್ಮ ಕೃಪೆಮಾಡಿ ಬಂದು
ನೆರೆ ತೊರೆ ಹಳ್ಳ ಕೊಳ್ಳಗಳಲ್ಲಿ ಅತ್ತಿತ್ತ ಆಡ್ಡಾಡುವ
ಕೆರೆ ಕಟ್ಟೆಗಳಲ್ಲಿ ವಿಶ್ರಾಂತಿ ಪಡೆಯುವ
ಬೆಟ್ಟ ಗುಡ್ಡಗಳ ನೆತ್ತಿಯನ್ನು ಜಾರುಬಂಡಿ ಮಾಡಿಕೊಂಡು
ಆಟವಾಡುವ ದೃಶ್ಯ
ಕಣ್ಣಿಗೆ ಬೀಳಲು ಪುಣ್ಯ ಮಾಡಿರಬೇಕು.
ಸರ್ತಿ ಸರ್ತಿಗೆ ಬರುವ ಈ ಹಿರಿಯರ ಹಬ್ಬಕ್ಕೆ ಕರೆಯದಿದ್ದರೂ
ನಿಲ್ಲಲಾರೆ

ಗಂಡ ಮಕ್ಕಳ ಕೂಡಿಕೊಂಡು
ಪುಟ್ಟ ಮೆರವಣಿಗೆಯಲ್ಲಿ ಸಾಗಿ ಬರುವೆ
ಜೀವನಾ ದ್ರವ್ಯವನು ಕೂಡಿಸಿ ಕೊಳ್ಳುವೆನು
ದೂರದಲ್ಲಿರುವಾಗಲೇ ಕೂನು ಹಿಡಿದ ಚಿಕ್ಕವರು
ಓಡೋಡಿ ಬಂದು
ಅತ್ತೆ, ಮಾವ ಬಂದರೆಂದು ಡಂಗುರ ಸಾರುವುದು
ಹಿರಿಯರು, ಎಲ್ಲರೂ ಬಾಗಿಲಿಗೆ ಬಂದು
ಉಲ್ಲಾಸದ ನಗೆಯಲ್ಲಿ ಸ್ವಾಗತದ ಸೆಳೇವು ನೀಡುವುದು
ಜೀವನದಿ ಮರೆಯಲಾಗದ ಸುಖಾನುಭವವ ತರುವುದು.

ಊಟ ಉಪಚಾರ ಮುಗಿದು
ಎರಡೂ ಕಡೆಯ ಮಕ್ಕಳ ಪ್ರತಿಭಾ ಪಾಠಗಳ ವರದಿಯ ಜೊತೆಜೊತೆಗೆ
ಪರಸ್ಪರ ಸುಖ ಸಂಕಥಾ, ಆಮೋದ ಪ್ರಮೋದದ ನೆರಿಕೆಯಲ್ಲಿ
ಇಣುಕುವಾಗ

ಮಾತಿಗೆ ನೂರು ಮುಖವಾಗಿ
ಸರಿಹೊತ್ತಾದರೂ ಕೊಡುಹ ಮುಗಿಯುವುದಿಲ್ಲ
ಒಬ್ಬೊಬ್ಬರೆ ನೆಂಟರು ಬಂದು ಸೇರಿದ ಹಾಗೆ ಉದ್ದುದ್ದ ಬೆಳೆವುದು
ಹಬ್ಬವೇ ಮುಗಿದು ಊರಿಗೆ ಹೊರಟು ಅರ್ಧ ದಾರಿಗೆ ಬಂದರೂ
ಮುಗಿಯುವ ಲಕ್ಷಣ ಕಣುವುದಿಲ್ಲ.

ಬಿಡುವಾಗಿ ಊರು, ಹೊಲಗಳ ಸುತ್ತ
ಒಂದು ಸುತ್ತು ಹಾಕಿ ಬರುವಾಗ
ಬಾಲ್ಯವು ಮರುಕಳಿಸುವುದು
ಎಲ್ಲಾ ಮುಗಿದು ಹೊರಟು ನಿಂತಾಗ
ಕ್ಷಣ ಕಾಲ
ಎಂದಿನಂತೆ ಕಣ್ಣು ಮಂಜಾಗುವವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಿಡಿಯೊಂದೆ!
Next post ಸಾಧನೆ

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

cheap jordans|wholesale air max|wholesale jordans|wholesale jewelry|wholesale jerseys