ನಾವು ಬಡವರು

ನಾವು ಮುಟ್ಟಿ ನಿಂತ ಮರದ
ಹೂವು ಉದುರಿತು
ನಾವು ನಡೆದ ಹಾದಿ ಹಸಿರು
ಉರಿದು ಹೋಯಿತು

ನಾವು ಕರೆದ ಕೆಚ್ಚಲಲ್ಲಿ
ಹಾಲು ಬತ್ತಿತು
ನಾವು ಹುಡುಕಿ ಕಂಡ ಹೃದಯ
ರಾಗ ಸತ್ತಿತು

ಸೋತ ಮುಖದ ಮನೆಗೆ ಬಳಿಯೆ
ಸುಣ್ಣ ಸಿಡಿಯಿತು
ಬಡವರೆಂದು, ಕಡೆದ ಕಲ್ಲು
ಕಣ್ಣ ಕಳೆಯಿತು

ಹಸಿರು, ಕೆಂಪು, ಬಟ್ಟಬಯಲು
ಎಲ್ಲ ಒಂದೇ ಬಣ್ಣವು
ಮಣ್ಣ ಹಾದಿ, ಟಾರು ಬೀದಿ
ಕಪ್ಪುಗಟ್ಟಿದ ತಂತಿಯು

ನಿಂತ ನೆಲದ ಬಿರುಕಿನಲ್ಲಿ
ಸುಳಿದಾಡುವ ಉಸಿರು
ಭೂಕಂಪದ ನಡುಕದಲ್ಲು
ಸಾವಿಲ್ಲದ ಹೆಸರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಫ್. ಎಮ್. ದೋಸ್ತೋವಸ್ಕಿಯ – Crime and Punishment
Next post ನನ್ನ ಕೆಲಸ

ಸಣ್ಣ ಕತೆ

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

cheap jordans|wholesale air max|wholesale jordans|wholesale jewelry|wholesale jerseys