ಸತ್ತಾಗ ನಾನು ಜಗಕೆಚ್ಚರವ ಸಾರುವುದು

ಸತ್ತಾಗ ನಾನು ಜಗಕೆಚ್ಚರವ ಸಾರುವುದು
ಗಂಟೆಯ ವಿಷಣ್ಣ ದನಿ : “ಕೀಳುಲೋಕವಿದನ್ನು
ಬಿಟ್ಟು ಓಡಿದ ತುಚ್ಛ ಕ್ರಿಮಿಜೊತೆ ಇರಲು” ಎಂದು;
ದುಃಖಪಡಬೇಕಿಲ್ಲ ನೀನು ಈ ಸಾಲನ್ನು
ನೋಡಿದರು ಸಹ; ಇವನು ಬರೆದಿಟ್ಟ ಕೈಯನ್ನು
ನೆನೆಯಬೇಕಿಲ್ಲ ; ನೆನಪದು ನೋವ ತರುವಲ್ಲಿ
ನಿನ್ನ ಮನಸ್ಸು ನನ್ನ ಎಲ್ಲ ನೆನಪನ್ನೂ
ಮರೆಯಲೆನ್ನುವೆ, ಅಂಥ ಒಲವೆನಗೆ ನಿನ್ನಲ್ಲಿ.
ನಾ ಮಣ್ಣ ಜೊತೆ ಬೆರೆತಮೇಲೆ ನೀನೀ ಕವಿತೆ
ನೋಡದಿದರು ಏನು, ಈ ಬಡಪಾಯಿ ಹೆಸರನ್ನು
ಪಠಿಸುವುದು ಬೇಡ ತುಟಿ ತಿರುತಿರುಗಿ ; ನನ್ನ ಜೊತೆ
ಅಳಿದುಹೋಗಲು ಕಳಿಸಿಬಿಡು ನಿನ್ನ ಒಲವನ್ನು.

ಇಲ್ಲದಿರೆ ನನಗಾಗಿ ನೀ ನೋಯುತಿರುವಾಗ
ಅಣಕವಾಡುವರೆಲ್ಲ ನಾನಿಲ್ಲದಿರುವಾಗ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 71
No longer mourn for me when i am dead

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾವಣಾಂತರಂಗ – ೧
Next post ಹಕ್ಕಿ ಮತ್ತು ಗಿಡುಗ

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

cheap jordans|wholesale air max|wholesale jordans|wholesale jewelry|wholesale jerseys