ಅತೃಪ್ತಿ

ಎಲ್ಲಿದೆಲ್ಲಿದೆ ತಣಿವು ? ಏತರಲ್ಲಿದೆ ತಣಿವು ?
ಎಲ್ಲಿಯೆಲ್ಲಿಯು ಕಾಣಲೊಲ್ಲದಾ ತಣಿವು!

ಕುಸುರುಕುಸುರಿನ ಚಿನ್ನ -ರನ್ನ ದೊಡವೆಗಳಿಟ್ಟು
ಹೊಸ ಮಿರುಗಿನಾ ಸೀರೆ ಬಣ್ಣಗುಪ್ಪಸ ತೊಟ್ಟು
ಸಾಕುಸಾಕಿನ್ನೆಂಬ ತಣಿವ ಪಡೆಯುವರು,
ಆ ಕೆಳದಿಯರು ನಕ್ಕು ನಲಿದಾಡುತಿಹರು.

ಇದು ಏನು? ನನ್ನದೀ ಎದೆಯಾಟವಚ್ಚರಿಯು!
ಒಡವೆಯುಡುಗೆಯನೊಲಿದು ಪಡೆಯುವೆನು, ಆದರೆಯು
ಒಡವೆ ಬಗೆದುಗುಡವನು ದೂಡಲಿಲ್ಲ!
ಉಡುಗೆ ತಣಿವನು ನಸುವು ನೀಡಲಿಲ್ಲ!

ಸರಿವರಯದವರೆಲ್ಲ ತೆರತೆರದ-ಹುರುಳಿರುವ-
ಅರಳುಗಳ ನುಡಿಮುಡಿದು ಹರುಷದಲಿ ಹಿಗ್ಗುವರು.
ಹಾರಯಿಸಿ ಹಾರಯಿಸಿ ಹೂಮುಡಿಯೆ ನಾನು,
ತೀರಲಿಲ್ಲವತೃಪ್ತಿ, ಹೇರಿತದು ಇನ್ನೂ!

ಕೊಳಲೂದಿ ವೀಣೆ ತಂಬೂರಿಗಳ ಬಾಜಿಸುತ
ಗೆಳತಿಯರು ಸುಲಭದಲಿ ಗಳಿಸುವರು ತೃಪ್ತಿಯನು;
ಕೊಳಲುಲಿಯು ಬಗೆದುಗುಡ ದೊಡಲಿಲ್ಲ!
ವೀಣೆ ತಣಿವನು ನಸುವು ನೀಡಲಿಲ್ಲ!

ಅನುಕೂಲದೈವರಾ ವನಿತೆಯರು, ನಾ ದೈವ-
ದನುನಯವ ಕಳೆದುಕೊಂಡವಳು; ದಿಟವೇ ದೇವ?
ಅಲ್ಲವಿಂತಿದು! ಅವರದದೆ ಸುಖದ ಕೊನೆಯು;
ಎಲ್ಲಿದೆಯೊ ದೂರ ನನ್ನಾ ಸುಖದ ಮನೆಯು..!

ಆ ಸುಖದ ಮನೆಯನೊಂದಿಸುವ ಒಡವೆಯ ಬಯಸಿ
ಆಶೆ-ಸೊನ್ನರತಿ ಬಗೆಯೊಳಗೆ ಬೆಂಕೆಯನಿರಿಸಿ
ಊದಿ ಉರಿಮಾಡಿ ಏನನೋ ಕಾಸುತಿಹಳು,
ಏತರಿಂದಲೊ ಯಾವುದನೊ ಹಣಿಯುತಿಹಳು.
* * * *
ಮನವ ಮನೆಮಾಡಿರುವ ದುಗುಡವನು ತೆಗೆದು
ತಣಿವನೀವಾ ಒಡವೆ ದೊರೆವುದೆನಗೆಂದು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಮ್ಮೆ ಪ್ರೀತಿಯಲಿ
Next post ನಾಳಿನ ಮಗು

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

cheap jordans|wholesale air max|wholesale jordans|wholesale jewelry|wholesale jerseys