ಅವನ ಬಿಟ್ಟು ಇವನ್ಯಾರು

ಎಲ್ಲಾ ಸ್ವಚ್ಛಂದದ ಸೆಳವು
ಒಳಗೊಳಗೆ ಇಳಿದ ತಂಗಾಳಿ,
ಮೈ ಹಗುರಾಗುವ ನಿನ್ನ ಸ್ಪರ್ಶ,
ಹರವು ದಾಟಿದ ಒಂದು ನದಿ ಬಯಲು.

ಘಮ ಘಮಿಸಿದ ಮುಂಜಾನೆ,
ಕಿರಣಗಳ ಸೋಕಿ ಉಮೇದಗೊಂಡ
ಭಾವಗಳು ಹೊಸ ಹಾಡು ಹಕ್ಕಿ ಕೊರಳು,
ಒಡಲ ತುಂಬ ಹಸಿರು ಚಿಮ್ಮುವ ಹವಣಿಕೆ.

ನಡೆಯುವ ದಾರಿತುಂಬ ಸತ್ಯದ ಬೆಳಕು.
ದಿವ್ಯ ದರ್ಶನಗಳ ಪದಕೋಶ ಎದೆಗೆ ಅಮರಿ,
ಮೂರ್ತದಲಿ ಅಮೂರ್ತಗಳ ಕವಿತೆಗಳು.
ಫಳಿಫಳಿಸಿದ ಕಣ್ಣ ಕಾಂತಿಯ ಪ್ರಭೆ ಮನೆಯೊಳಗೆ.

ನೆಲ ನೀರು ಗಾಳಿ ಮಳೆಯಲಿ ಕರಗಿ ಸೂರ್ಯ,
ಹುಡುಕುವ ಹೊಸ ಹುಟ್ಟಿನ ದಾರಿ ತಾಯಿ ಗರ್ಭ.
ಪುಟ್ಟ ಚಂದಿರನ ಬೆಳದಿಂಗಳು ಹರಡಿ ಹಾಸಿದ ಮಾಡು,
ಚಂದದ ಲಾಲೀ ಹಾಡಿದ ಪ್ರಥಾ ಪೂರ್ಣ ಸುಂದರಿ.

ಎಲ್ಲಾ ದಿಕ್ಕುಗಳು ಕಂಪನಗಳ ಕಂಪು ಹಣಿದು
ಬಯಲಲ್ಲಿ ಬೆತ್ತಲಾದ ಮುಪ್ಪು, ಅದಕ್ಕೂ ಇದಕ್ಕೂ
ಎಲ್ಲರೊಳಗೊಂಡು ಜೇನು ಹಂಚಿ ಜನನಿಬಿಡ ಸಂತೆ.
ಸಂತನಾಗುವ ಪರಿಯ ಅಚ್ಚರಿಯ ವಿಸ್ಮಯ ವ್ಯೋಮ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಓ ದೇವಿಯೆ
Next post ಶಾಪ !

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

cheap jordans|wholesale air max|wholesale jordans|wholesale jewelry|wholesale jerseys