ಅಂದು ರಾತ್ರಿ ಮಲಗಿದವರು
ಏಳಲೇ ಇಲ್ಲ
ಕಳಚಿ ನಡೆದರು ದೂರ ದೂರ
ಬದುಕಿನ ಬವಣೆಗಳನ್ನೆಲ್ಲಾ.
ವರವೋ ಶಾಪವೋ ಅವರಿಗೆ ಭೂಕಂಪ
ಜನತೆ ತೋರುತಿದೆ ನಿಟ್ಟುಸಿರಿನ ಅನುಕಂಪ
ಕನಸನ್ನು ಕನಸಾಗಿಯೇ ಉಳಿಸಿ
ನಶ್ವರ ಬಾಳಿನ ಸತ್ಯವ ತಿಳಿಸಿ
ನಡೆದರು ದೂರ ಬಹು ದೂರ
ಗೊತ್ತು ಗುರಿ ಇಲ್ಲದ ತೀರ
ತಮ್ಮೆದೆಯ ಕುಡಿಗಳೇನಿತ್ತೋ
ಆಸೆ ಆಕಾಂಕ್ಷೆಯ ಹೊನಲೆಷ್ಟಿತ್ತೋ
ಅರಿಯುವರಾರು ಬಾಳಿನ ಗುಟ್ಟು
ಎಲ್ಲವನ್ನು ಉಳಿದವರಿಗಾಗಿ ಬಿಟ್ಟು
ನಡೆದರು ದೂರ ಬಹು ದೂರ
ಇಳಿಸಿ ಬದುಕಿನ ಭಾರ
ಕನಸುಗಳು ಕಮರಿದವು ಉಸಿರಿನೊಂದಿಗೆ
ಬಯಕೆಗಳೂ ಬೂದಿಯಾದವು ಚಿತೆಯೊಂದಿಗೆ
ನೋವು ನಲಿವುಗಳ ಬೇಲಿ ಕಿತ್ತೆಸೆದು
ನಡೆದರು ದೂರ ಬಹು ದೂರ
ಪಡೆದು ನೆಮ್ಮದಿಯ ತೀರ
*****
Related Post
ಸಣ್ಣ ಕತೆ
-
ಧರ್ಮಸಂಸ್ಥಾಪನಾರ್ಥಾಯ
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…
-
ಹಳ್ಳಿ…
ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…
-
ಮಲ್ಲೇಶಿಯ ನಲ್ಲೆಯರು
ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…
-
ಮೃಗಜಲ
"People are trying to work towards a good quality of life for tomorrow instead of living for today, for many… Read more…
-
ಇನ್ನೊಬ್ಬ
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…