ದುರ್‍ಲಭಯುಕ್ತಿ

“ತಿಣಕದಿರು ಸುಖದ ಸಂಪಾದನೆಗೆ -ಒಂದಿನಿಸು
ನಗೆ, ಇನಿಸು ದುಃಖ ವಿಸ್ಮೃತಿ, ಇನಿಸು ಲೋಕಾನು-
ಭವವು, ರಸಿಕತೆ ಇನಿಸು, ತಾಳ್ಮೆಯಿರೆ ಇನಿಸಾನು;
ಹಲಸು ಕಾತಂತೆ ರಸಭಾವ ರೋಮಾಂಚಿತಸು.
ಹಸು ಕರುವಿನೆಡೆಗೆ ಕೆಚ್ಚಲುದೊರೆದು ಬರುವಂತೆ,
ಅಂಬೆಗರೆಯಲು ಕರುಳು, ಆನಂದ ತೊರೆಯುವದು,
ಹರಿಯುವದು, ಮೇರೆವರೆಯುವದು, ಹೃದಯದೊಳು ವಿಧು
ಬಿಂಬ ತುಂಬುವದು. ಬರಿದೇಕೆ ಭ್ರಾಂತಿಯ ಚಿಂತೆ?”

ಸುಖ ಸುಲಭ, ಅದರ ಹದ ದುರ್‍ಲಭವು ಎನುವ ರೀ-
ತಿಯು ರಮ್ಯ! ನಗೆ ಪಾರಿಜಾತ ಸುಕುಮಾರ ಸುಮ,
ಕಲ್ಲೊಳಕ್ಕರ ದುಃಖ; ಲೋಕಾನುಭವ ದರೀ-
ಕುಹರಗರ್‍ಜನೆ; ರಸಿಕಲಹರಿಯದು ಡಂಭ ಸಮ
ಸರಣಿ; ತಾಳ್ಮೆಯು ಕಪ್ಪೆ ತೂಕ; ಯೋಗವು ಹರೀ-
ಚ್ಛೆಯು; ಸುಖವು ಭ್ರಮವು; ಈ ಮನದ ಪಾಕವೆ ವಿಷಮ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರ್ಣಾಟಕದ ಕುಶಲತೆಯ ಪೂರ್ವಚರಿತ್ರೆ
Next post ನಡತೆ

ಸಣ್ಣ ಕತೆ

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…