ಮುಂಗಾರು

ಮುಂಗಾರು ನನ್ನ ಮುಂದಾರೆಂಬ ಬಿಂಕದಲಿ
ಮುಂದಲೆಯ ಕೇಶರಾಶಿಯನೆತ್ತಿ ಕಣ್ಕಿಸಿದು,
ಎಬ್ಬಿಸಿದ ಕೆಂಧೂಳಿ ಕಾರ್‍ಮುಗಿಲ ಮುಟ್ಟಲದು
ರಕ್ಕಸಿಯ ರಕ್ಕಸದಿ ನಿಂತಿದೆ ದಿಗಂತದಲಿ
ಮುಂಗಾರ ಸಿಂಗಾರವಿದು ನಿರಾತಂಕದಲಿ
ಮುಚ್ಚಿಹುದು ಹಗಲ ಬಂಗಾರವನು ಬೆಚ್ಚಿಹುದು
ಮುಂಗಾರ ಸಿಡಿಲು-ಮಿಂಚನು ಮೊದಲುಸಲ ಕಂಡು
ಮಗುವೊಂದು ನಿದ್ದೆ ತೊಲಗಿರೆ ಮಾತೆಯಂಕದಲಿ

ಮರುಕ್ಷಣವೆ ನಗುತಿಹುದು ಓ! ಎಲ್ಲ ಬಯಲಾಗಿ
ಕೊನರಿತ್ತು ರವಿಯ ನಗೆ. ಪ್ರೀತಳು ಧರಾಂಗನೆಯು.
ಅಲ್ಲಲ್ಲಿ ನಿಂತ ಕಿರಿಗೊಳದಿ, ನವ ಮಾಸಗಳು
ಮಾಸಿರುವ ಮೈಯ್ಯ ತೊಳೆವವು ಹಕ್ಕಿ, ನೆರೆಯಾಗಿ
ತಂಪು-ಬರುತಿದೆ ಕಂಪು: ಶಾಂತ ಮೌನದ ಮುಗುಳು
ಬಿಚ್ಚಿಹುದು ಮುಂಗಾರು ಇಂಥ ಸೊಬಗಿನ ನನೆಯು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುದ್ದು ಕಂದನ ವಚನಗಳು: ಎರಡು
Next post ಗಾಜಿನ ಅರಮನೆ

ಸಣ್ಣ ಕತೆ

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…