ಒಂದು ಸುಂದರ ಬಿದರಿನ ತೋಪು. ತೋಪಿನ ಒಳಗೆ ಪುಟ್ಟ ಮನೆ. ಮನೆಯ ಮುಂದೆ ಪುಟ್ಟ ಕೊಳ. ಕೊಳದ ಸೋಪಾನದಲ್ಲಿ ಪ್ರಕೃತಿಯ ಸೌಂದರ್ಯ ಸವಿಯುತ್ತ ಕವಿ ಕುಳಿತಿದ್ದ. ಕವಿ ಮನವು ಹಾಡಿದಾಗ ಬಿದಿರು ಬೊಂಬು ತನ್ನ ಹೃದಯದ ಖಾಲಿ ಜಾಗದಲ್ಲಿ ನಾದ ತುಂಬಿಕೊಂಡು ನಲಿಯುತ್ತಿತ್ತು. ಕವಿಯ ಹಾಡಿನ ನಾದ ಲಹರಿ ಜಲತರಂಗದಲ್ಲಿ ಒಂದಾಗಿ ಲೀನವಾಗುತಿತ್ತು. ಕೊಳದ ಕಟ್ಟೆಯಲ್ಲಿ ಕುಳಿತ ಹಕ್ಕಿ ಕವಿತೆ ತುಂಬಿದ ನೀರನ್ನು ಕುಡಿದು ಸಂತಸದ ಹಾಡನ್ನು ಹಾಡುತಿತ್ತು. ಕವಿಮನ ಒಮ್ಮೆ ಬರಿದಾಯಿತು. ಸ್ಫೂರ್ತಿ ಬತ್ತಿ ಮೋಡ ಕವಿಯಿತು. ಕೊಳದ ಹೃದಯದಿಂದ ಕಾರುಣ್ಯದ ಕವಿತೆಗಳು ತೇಲಿ ಬಂದವು. ಹಕ್ಕಿ ರೆಕ್ಕೆ ಬಡಿದು ಹಾಡತೊಡಗಿತು. ಪ್ರಕೃತಿಯ ವೃಂದಗಾನದಲ್ಲಿ ಕವಿಮನ ಸ್ವಾಂತ್ವನ ಪಡೆದು ಮುದ ಗೊಂಡಿತು. ಕವಿ ತುಂಬಿ ಕೊಟ್ಟಿದ್ದ ಕವಿತೆಗಳೆಲ್ಲ ಮತ್ತೆ ಎದೆತುಂಬಿ ನಲಿದು ಬಂದವು. ಬಿದಿರ ಭಾವಕ್ಕೆ, ಕೊಳದ ಕಾವ್ಯಕ್ಕೆ, ಹಕ್ಕಿಯ ನಲುಮೆಗೆ, ಕವಿ ಮಾರು ಹೋದ. ಪ್ರಕೃತಿಯಲ್ಲಿ ಒಂದಾದ.
*****
Related Post
ಸಣ್ಣ ಕತೆ
-
ಹಳ್ಳಿ…
ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…
-
ಅಪರೂಪದ ಬಾಂಧವ್ಯ
ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…
-
ಹುಟ್ಟು
ಶಾದಿ ಮಹಲ್ನ ಒಳ ಆವರಣದಲ್ಲಿ ದೊಡ್ಡ ಹಾಲ್ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…
-
ಕೆಂಪು ಲುಂಗಿ
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…
-
ವಿರೇಚನೆ
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…