ಸುಗ್ಗಿ ಮಾಡೋಣು ಬಾರವ್ವ ಗೆಳತಿ

ಸುಗ್ಗಿ ಮಾಡೋಣು ಬಾರವ್ವ ಗೆಳತಿ
ಸುಮ್ಮನಾಕ ಕುಳತಿ || ಪ ||

ಅಗ್ಗದ ಫಲಗಳ ಕೊಯ್ಯಲಿಕ್ಕೆ ಹೊಲದವ-
ರೊಗ್ಗಿಲೆ ಕರೆದರೆ ಹಿಗ್ಗಿಲಿ ಹೋಗಿ ||ಅ.ಪ.||

ಹೊಲದವ ಕರೆದರೆ ಹೋಗಲಿಬೇಕು
ನೆಲೆಯನು ತಿಳಿಯಬೇಕು
ಕುಲದವರೊಂದು ಸಲಗಿಯ ಸಾಕು
ಬಲು ಜೋಕಿರಬೇಕು
ಹೊಲದೊಳು ಬೆಳದಿಹ ಹುಳ್ಳಿ ಮಿಕ್ಕಿ ಕಸ
ತಳದ ಕೋಲಿಯ ದಾಟಿ ಕೊಯ್ಯೋಣಮ್ಮಾ ||೧||

ಏಳೆಂಟು ಅಕ್ಕಡಿಯ ಎಣಿಸಿ
ಬಾಳದರೋಳು ದಣಿಸಿ
ಕಾಳಕೂಟದ ವಿಷವೆಣಿಸಿ ಎಲ್ಲವೆಲ್ಲವ ಗಣಸಿ
ಬಾಳೊಂದು ರಾಗಿ ನವಣಿ ಸಾವಿ ಸಜ್ಜಿಯ
ಓಲ್ಯಾಡುತ ಬಹು ರಾಗದಿ ಕೊಯ್ಯುತ್ತಾ ||೨||

ಶಿಶುನಾಳಧೀಶ ತಾನೀಗ ಅವ ಕರಿಯುವದ್ಹ್ಯಾಂಗ
ವಸುಧಿಯೊಳ್ ಬೆಳಸಿದ ಬೇಗಾ
ಕರಿದರೆ ಗಡ ಹೋಗ
ಕಸವ ಕಳಿದು ಕೈ ಕುಡಗೋಲ ಹಿಡಿಯುತ
ಹಸನಾಗಿ ಹಲವರು ಹರಿವ ಮನವ ಸುಟ್ಟು ||೩||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೋಹದ ಹೆಂಡತಿ ಸತ್ತ ಬಳಿಕ
Next post ನನ್ನ ಹೇಣ್ತೆ ನನ್ನ ಹೇಣ್ತೆ

ಸಣ್ಣ ಕತೆ

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

cheap jordans|wholesale air max|wholesale jordans|wholesale jewelry|wholesale jerseys