ಮರದ ವ್ಯಥೆ

ನಿಮ್ಮ ಮನೆಯಂಗಳಕೆ ಗುಲಾಬಿ
ಮಲ್ಲಿಗೆ ಗಿಡವಾಗಿ ಬೆಳೆದಿದ್ದರೆ
ನಿಮ್ಮ ಉಡಿಯಲಿ ಬೆಚ್ಚಗಿರುತ್ತಿದ್ದೆ.

ಬೆಳೆದಿದ್ದೇನೆ, ಅಲ್ಲಲ್ಲ-ಬೆಳೆಸಿದ್ದಾರೆ
ಕಾರ್ಪೊರೇಶನ್‌ದವರು ನಿಮ್ಮ ಕಂಪೌಂಡಿನ ಹೊರಗೆ
ಅದಕ್ಕೆ ನಾನು ನಿಮ್ಮ ಮಗುವಲ್ಲವೆಂದು ಗೊತ್ತಾದುದು.
ಬೆಳೆಯುತ್ತಿದ್ದೇನೆ ನಿಮ್ಮ ಮಕ್ಕಳನು
ನೋಡುತ್ತಾ ಆಟ ಆಡುತ್ತಾ,
ಮೈಲಿಗೆ ಅಸಮಾನತೆ ಅನಿಸಿತೋ
ಕೈ ಕತ್ತರಿಸಿದ್ದೀರಿ
ಪೋಲಿ ಹುಡುಗರು ಮತ್ತೊಂದು ಕೈ ಮುರಿದರು.
ಆದರೂ ಮತ್ತೆ ಚಿಗುರಿ ಮರವಾಗಿ ಬೆಳೆದು
ನೆರಳು ಕೊಡುವ ಕನಸುಕಣ್ಣಿನ ಮರ ನಾನು.

ನಾಯಿಹಂದಿಗಳ ಕಚ್ಚಾಟದ ನಡುವೆ
ವಿಷಹೊಗೆಯ ಒದೆತಗಳು ತಿನ್ನುತ
ಬೆಳೆಯುತ್ತಿದ್ದೇನೆ ಇಕ್ಕಟ್ಟಾದ ರಸ್ತೆಯ ಎಡಬಲಕೆ.

ಆದರೇನು!-
ವಿದ್ಯುತ್ ಇಲಾಖೆಯವ ಕಠಿಣ ಹೃದಯಿ
ಕೆಳಗೆ ಕೆಬಲ್‌ಗೆಂದು ಕಾಲುಬೆರಳುಗಳು ಕತ್ತರಿಸಿ
ಮೇಲೆ ತೋಳು ತೋಳುಗಳೂ ಕತ್ತರಿಸಿದ
ಹೃದಯವಂತ ಭಕ್ತರೂ ಕೂಡಾ
ಗಣೇಶ ಮೆರವಣಿಗೆಯ ಲಾರಿಗೆ
ಅಡ್ಡ ಎಂದು ಮತ್ತೆ ಮತ್ತೆ ಮುರಿದು ಎಸಿಯುವದೆ?

ಉರುವಲಕೆ ಲಟಲಟನೆ
ಮುರಿಯುವ ಕೆಲವರ ಖುಷಿಯೊಳಗೆ
ನನ್ನುಸಿರ ಸುಡುವುದು ಗೊತ್ತಾದೀತೆ?

ಈಗ,
ಬಳಲಿ ಬಳಲಿ ಕೃಶವಾಗಿ
ಆಕಾಶಕ್ಕೆ ಮೊರೆಯಿಡುತ್ತ ಮೇಲೇರುತ್ತಿದ್ದರೆ
ಅಲ್ಲಿಯೂ ಗಾಳಿದೇವನ ಹೊಡೆತವೆ?
ಎಷ್ಟೊಂದು ಸಹಿಸಲಿ ನಾನು?
ನಿಮ್ಮ ಮನೆಯ ಮೇಲೆ
ಸ್ಕೂಟರ್ ಕಾರ್ ಕಂಪೌಂಡುಗಳ ಮೇಲೆ
ಬಿದ್ದದ್ದು ನಿಮಗೂ ಒಂದಿಷ್ಟು ಪೆಟ್ಟು ಕೊಟ್ಟದ್ದು
ನನಗೂ ವ್ಯಥೆ, ಹೇಳಿ ಏನು ಮಾಡಲಿ ನಾನು
ನೀವೇ ಮಾಡಿದ್ದು
ಮಾಡಿದ್ದುಣ್ಣೋ ಮಹಾರಾಯಾ.

ಒಂದೈದು ನಿಮಿಷ ಬನ್ನಿ ಬನ್ನಿ
ನಿಮ್ಮ ಕಂಪೌಂಡಿಗೆ, ಸುಂದರ ಟೆರಸ್ಸಿಗೂ
ಅಂಗಾಂಗ ಕೊಚ್ಚಿ ಕೊಚ್ಚಿ ಹಾಕಿ
ಮೊಂಡು ಮಾಡಿದ ಈ
ಕುಷ್ಟರೋಗಿಯನ್ನೋ ಕುಂಟನನ್ನೋ ನೋಡಲು.
ಕಾಡಿನಲಿ ಹುಟ್ಟಿಬೆಳೆದರೂ
ಬಿಡುವುದಿಲ್ಲ ಬಿಡಿ ನೀವು
ಬೆಂಕಿ ಹಚ್ಚುವದು, ಬೇರು ಸಮೇತ ಉರುಳಿಸಿ
ನಿಮ್ಮ ಮನೆಗೆ ಬಾಗಿಲುಮಾಡಿ
ನೀವು ಭಧ್ರವಾಗಿದ್ದು
ನಮ್ಮನ್ನು ಅಭಧ್ರವಾಗಿಸುವವರು.

ದೇವರೇ ಕ್ಷಮಿಸು ಮನುಷ್ಯರನು
ಕಲಿಸು ಪ್ರೀತಿ ಶಾಂತಿ ಸಹನೆ!
————————
‘ಹಿಂದೆ ಬಂದರೆ ಒದಯಬೇಡಿ ಮುಂದೆ ಬಂದರೆ ಹಾಯಬೇಡಿ’- ಗೋವಿನ ಹಾಡು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಕೃತಿ ಜನ್ಯ
Next post ಅಂತರ

ಸಣ್ಣ ಕತೆ

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

cheap jordans|wholesale air max|wholesale jordans|wholesale jewelry|wholesale jerseys