ಸೋರುತಿಹುದು ಮನೆಯಮಾಳಿಗಿ

ಸೋರುತಿಹುದು ಮನೆಯಮಾಳಿಗಿ ಅಜ್ಞಾನದಿಂದ
ಸೋರುತಿಹುದು ಮನೆಯಮಾಳಿಗಿ ||ಪ||

ಸೋರುತಿಹುದು ಮನೆಯಮಾಳಿಗಿ
ದಾರುಗಟ್ಟಿ ಮಾಳ್ಪರಿಲ್ಲ
ಕಾಳಕತ್ತಲೆಯೊಳಗೆ ನಾನು
ಮೇಲಕೇರಿ ಮೆಟ್ಟಲಾರೆ ||೧||

ಮುರುಕು ತೊಲೆಯು ಹುಳುಕು ಜಂತಿ
ಕೊರೆದು ಸರಿದು ಕೀಲ ಸಡಲಿ
ಹರಕು ಚಪ್ಪರ ಜೇರು ಗಿಂಡಿ
ಮೇಲಕೇರಿ ಮೆಟ್ಟಲಾರೆ ||೨||

ಕರಕಿಹುಲ್ಲು ಕಸವು ಹತ್ತಿ
ದುರಿತಭವದಿ ಇರಬಿ ಮುತ್ತಿ
ಜಲದ ಭರದಿ ತಿಳಿಯಮಣ್ಣು
ಒಳಗೆ ಹೊರಗೆ ಏಕವಾಗಿ ||೩||

ಕಾಂತೆ ಕೇಳೆ ಕರುಣದಿಂದ
ಬಂತು ಕಾಣೆ ಹುಬ್ಬಿ ಮಳಿಯು
ಈಗ ಶಿಶುವಿನಾಳ ಗ್ರಾಮಕ
ಮೇಘರಾಜ ಒಲಿದು ಬಂದ ||೪||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಹಕಾರ ಮಂತ್ರ
Next post ನಾಯಿಯ ಸಾಕಿದರು

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

cheap jordans|wholesale air max|wholesale jordans|wholesale jewelry|wholesale jerseys