ಮೂಕನಾಗಿರಬೇಕೋ ಜಗದೊಳು

ಮೂಕನಾಗಿರಬೇಕೋ ಜಗದೊಳು
ಜೋಕ್ಯಾಗಿರಬೇಕೋ ||ಪ||
ಕಾಕು ಕುಹಕರ ಸಂಗ ನೂಕಿರಬೇಕೋ
ಲೋಕೇಶನೊಳಗೇಕಾಗಿರಬೇಕೋ ||ಅ.ಪ||

ಕಚ್ಚುವ ನಾಯಿಯಂತೆ ಬೊಗಳ್ವರೋ
ಹುಚ್ಚರಂದದೊಳಿಹರೊ ಎಚ್ಚರಿಲ್ಲದವರೋ
ಲುಚ್ಚೇರು ನಾಚಿಕಿ ತೊರದಿಹರೋ
ಮುಚ್ಚಿದಾ ಸುದ್ದಿಯ ಬಚ್ಚಿಡದಂಥಾ
ಕುತ್ಸಿತ ಮನುಜರನಗಲಿರಬೇಕೋ ||೧||

ಲೋಕನುಡಿಯ ಮಾತಾಡುವರೋ
ಕುಹಕ ಬುದ್ಧಿಯ ಜನರೋ
ತಾಕುತಗಲು ನುಡಿಯನಾಡ್ವರೋ
ತೂಕನರಿಯದವರೋ
ಸೂಕರ ಮನುಜರ ಸಂಗತಿ ಹಿಂಗಿಸಿ
ಶ್ರೀಕರ ಬ್ರಹ್ಮ ತಾನಾಗಿರಬೇಕೋ ||೨||

ನಡಿನುಡಿಗೆ ನುಡಿಯಬೇಕೋ ಗುರುವಿನಾ
ಅಡಿಯ ಪಿಡಿಯಬೇಕೋ
ಕಡುಮದದೊಳಿರಬೇಕೋ
ದುರ್ಜನರಾ ನಡತಿಯ ಬಿಡಬೇಕೋ
ಪೊಡವಿಪ ಶಿಷುನಾಳ ಒಡಿಯನ ಕಂಡು
ಗುಡಿಪುರ ಕಲ್ಮನ ಕೂಡಿರಬೇಕು ||೩||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಿನಮಾನ ಬಲು ಕೆಟ್ಟವೋ
Next post ನಗೆ ಡಂಗುರ – ೩

ಸಣ್ಣ ಕತೆ

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

cheap jordans|wholesale air max|wholesale jordans|wholesale jewelry|wholesale jerseys