ಚಂದ್ರ ಚಕೋರಿ

ಇರುಳಿನ ಮಡಿಲಲಿ ಒಲವಿನೊಂದು ಮನ-
ದಾಸೆಯ ನನಸಂತೆ,
ಆಗಸದೊಡಲಲಿ ಚಂದಿರ ನಗುತಿರೆ,
ಜೀವನೆ ಕನಸಂತೆ!

ಒಂದು ಚಕೋರಿಯು ಚಂದಿರನೊಲವನು
ಪಡೆಯಲಂದು ಮನವ
ಭಾವ ಪುಷ್ಪಗಳ ಪರಿಮಳವಾಗಿಸಿ
ಹರಿಸಿತು ಎದೆಯೊಲವ

ಹಕ್ಕಿ ಚಂದಿರನ ಸನಿಯ ಸಾರಲಿಕೆ
ಚಿಮ್ಮಿ ಹಾರುತಿಹುದು.
ಒಲವಿನ ಎಣೆಯಿಲ್ಲದ ಸುಖದಾಸೆಯು
ಸ್ಫೂರ್ತಿಯನಿತ್ತಿಹುದು.

ಹಾರಿ ಹಾರಿ, ಸರಿ ಸಾರಿ ಬೀಳುತಿರೆ,
ಹಕ್ಕಿ ನೋಡಿತಲ್ಲಿ,
ಇರುಳನಲ್ಲ ತನ್ನೊಲವ ಚಂದಿರನು
ಹಗಲ ಹಿಡಿತದಲ್ಲಿ.

ತನ್ನೆದೆಯೊಲವಿನ ಆಸೆಯೆಲ್ಲ ಹುಸಿ
ಹುಡಿಯ ಗುಡ್ಡೆಯಾಗಿ,
ಹಕ್ಕಿ ಚಿಂತಿಸಿತು ಇನಿಯನ ಜತೆಯನು
ಸೇರುವ ಬಗೆಗಾಗಿ.

ಸುಖ ಸಂತೋಷದಿ ನೋಡಿತೊಂದು ಕಿಡಿ
ಬೆಂಕಿ ಮಸಣದಲ್ಲಿ;
“ಇದರ ಉಡಿಯೊಳೆನ್ನೆದೆಯ ನೀಗುವೆನು,
ಉಳಿವೆ ಬೂದಿಯಲ್ಲಿ.

ಮುಂದಕೊಂದು ದಿನ, ಶಿವನು ಈ ಕಡೆಗೆ
ಬಂದೆ ಬರುವನಂದು,
ಚಿತೆಯ ಭಸ್ಮವನು ಕೈಯಲೆತ್ತಿ ಹರ
ಹಣೆಗೆ ಇಡುವ ನಿಂದು.

ಶಂಕರ ಶಿರದಲಿ ರಾಜಿಸುತಿಹನದೊ,
ಇನಿಯನವನ ಬಳಿಗೆ
ಚಿತೆಯ ಭಸ್ಮದಲಿ ಸಾರಿ ಸೇರುವೆನು,
ತ್ಯಾಗ ಒಲವ ನೆರಿಗೆ.”

ಎನುತ ಹಕ್ಕಿ ಹಾರಿತ್ತು ಬೆಂಕಿಯಲಿ,
ಮೂರೆ ಗಳಿಗೆಯಲ್ಲಿ
ಜೀವ ಹಾರಿರಲು, ರವಿಯು ಉದಿಸಿದನು
ಬಾಳ ಮೂಡಲಲ್ಲಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರೋಪ – ೧೫
Next post ಲೋಕಸಿರಿ

ಸಣ್ಣ ಕತೆ

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

cheap jordans|wholesale air max|wholesale jordans|wholesale jewelry|wholesale jerseys