Home / ಕವನ / ಕವಿತೆ / ನಾವು ಪ್ರೀತಿಸುವವರು

ನಾವು ಪ್ರೀತಿಸುವವರು

ಈ ದೇಶದಲಿ ನ್ಯಾಯ ನಿರ್ಣಯಕೆ
ಬಂದ್ ಆಚರಣೆ ಪ್ರಜೆಗಳ ತುಟಿಗಳಿಗೆ
ಹೊಲಿಗೆ ಹಾಕಿ ಬಿಗಿ ಬಂಧನ
ಪ್ರತಿ ದಿನದ ಒಂದು ಹೊತ್ತಿನ ಊಟಕೆ
ಪರದಾಡುವ ಕೂಲಿಗೆ ಯಾವ ಆದೇಶ
ಬೆಚ್ಚನೆಯ ಭರವಸೆ ಹುಟ್ಟು ಹಾಕೀತು
ದೂರಾದುಷ್ಠರ ಆಡಳಿತದ ಕಪಿ ಮುಷ್ಠಿಗೆ
ನಲುಗಿದ ಅವರಿವರ ಹೂವಿನ ಆತ್ಮಗಳು.

ನನ್ನ ಮಗಳಿಗೆ ಶಾಲೆಗೆ ರಜೆ ಘೋಷಿಸಿದ್ದಾರೆ
ಯಾಕೆ ಅಮ್ಮ ಅಂತ ಅವಳು ನೂರು ಬಾರಿ
ಕೇಳಿದ್ದಾಳೆ ಪ್ರಶ್ನೆಗಳಿಗೆ ನನ್ನಲ್ಲಿ ಉತ್ತರವಿಲ್ಲ
ಮಗಳ ಮುಂದಿನ ದಿನಗಳು ಕರಾಳ
ಹಾಯಾಗಿಲ್ಲ ಎಲ್ಲೆಲ್ಲೂ ಹತಾಶೆಗಳು
ದೇಶದಲ್ಲಿ ಸತ್ತವರು ಸತ್ತವರ ಗೋರಿಗಳು
ದ್ವೇಷವನ್ನೂ ರೋಷವನ್ನೂ ಹುಟ್ಟು ಹಾಕುತ್ತವೆ
ಮುಳ್ಳಿನ ಕಂಟಿಗಳಿಂದ ಶಾಂತಿ ಹೂಗಳ ಹೇಗೆ ತರಲಿ.

ಎಷ್ಟೊಂದು ಸಮಯ ಹಾಳು ಮಾಡುತ್ತಾರೆ
ದುಡಿಯುವ ಲಜ್ಜೆಗೇಡಿಗಳು ತಿಳಿಗೇಡಿನ
ಸೆಣಸಾಟದಲಿ, ಗದ್ದಲ ಎಬ್ಬಿಸುವುದು ಬಿಟ್ಟು
ಇನ್ನೇನು ಗೊತ್ತು ಜನರಿಗೆ ಗೊಂದಲ ಪುರದಲಿ
ಕೊನೆವರೆಗೂ ಉಳಿಯುವ ಕಣ್ಣೀರಿಗೆ
ಇವರೇಕೆ ಕೊಡಲಿ ಕಾವು ಹಚ್ಚುತ್ತಾರೆ
ಅಲ್ಲಿ ಒಂದು ಮಕ್ಕಳ ನಂದನವನ ಅರಳಲಿ
ನಾವು ಪ್ರೀತಿಸುವವರು ಸಿಗಲಿ ದೇವರೇ
ಈ ಜಗದಲಿ ಒಂದು ವಿಸ್ಮಯ ಮುಗುಳ್ನಗೆಯಲಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...