Home / ಲೇಖನ / ವಿಜ್ಞಾನ / ಯಂತ್ರ ವೈದ್ಯರು ಬರಲಿದ್ದಾರೆ!

ಯಂತ್ರ ವೈದ್ಯರು ಬರಲಿದ್ದಾರೆ!

೨೦೪೦ರ ಹೊತ್ತಿಗೆ ಅತಿಸೂಕ್ಷ್ಮ ಮತ್ತು ಪರಿಪೂರ್ಣ ರೋಬಟ್‌ಗಳನ್ನು ವಿಜ್ಞಾನಿಗಳು ಸಂಯೋಜಿಸುತ್ತಾರೆ. ಬ್ಯಾಕ್ಟೀರಿಯಾ ಗಾತ್ರದಲ್ಲೂ ಕೂಡ ಇವು ಇರುತ್ತವೆ. “ನ್ಯಾನೋ ಡಾಕ್ಸ್” ಎಂದು ಕರೆಯಲ್ಪಡುವ ರೋಬಟ್ ವೈದ್ಯನ ಶರೀರದಲ್ಲಿ ಸೂಕ್ಷ್ಮ ದರ್ಶಕಗಳನ್ನು ಅಳವಡಿಸಲಾಗಿದೆ. ಶರೀರಕ್ಕೆ ಹಾನಿಯುಂಟು ಮಾಡುವ ಸೂಕ್ಷ್ಮಜೀವಿಗಳು, ವಿಕೃತಗೊಂಡ ರಕ್ತಕಣಗಳು ಮತ್ತು ಕ್ಯಾನ್ಸರ್ ಕಣಗಳನ್ನು ಪತ್ತೆಹಚ್ಚುವ ದೃಶ್ಯ ವ್ಯವಸ್ಥೆಯ ‘ಮೆಮೋರಿ’ಯನ್ನು ಅಳವಡಿಸಲಾಗುತ್ತದೆ. ಶಸ್ತ್ರ ಚಿಕಿತ್ಸೆಯ ಅವಶ್ಯಕತೆ ಇದ್ದಲ್ಲಿ ಇವು ರಕ್ತವನ್ನು ಶುದ್ಧಿಗೊಳಿಸುತ್ತವೆ. ಈ ನ್ಯಾನೋ ಇಂಜಿನ್‌ಗಳು (ರೋಬಟ್ ವೈದ್ಯ) ರೋಗಕಾರಕ ಸೂಕ್ಷ್ಮ ಜೀವಿಗಳನ್ನು ಗುರುತಿಸಿ ಅವುಗಳ ಹೊರಕವಚವನ್ನು ಭೇಧಿಸುವದರಿಂದ ಬಿಳಿ ರಕ್ತಕಣಗಳಿಗೆ ಆ ಸೂಕ್ಷ್ಮ ಜೀವಿಗಳನ್ನು ನಾಶಪಡಿಸಲು ಅನುಕೂಲವಾಗುತ್ತದೆ. ಹಲವಾರು ವರ್ಷಗಳಿಂದ ಶರೀರದಲ್ಲಿ ನೆಲೆಗೊಂಡ ಸೂಕ್ಷ್ಮಜೀವಿಗಳನ್ನು ಈ ರೋಬಟ್ ಇಂಜಿನ್‌ಗಳು ಪತ್ತೆಹಚ್ಚುತ್ತವೆ. ಬೋಸ್ಟನ ಕಾಲೇಜಿಗೆ ಸೇರಿದ ಟಿ. ರಾಸ್‌ಕೆಲ್ಲಿ ಮತ್ತು ತಂಡವು ಕೇವಲ ೭೮ ಪರಮಾಣುಗಳ ಒಂದು ನ್ಯಾನೋ ಇಂಜಿನನ್ನು ರೂಪಿಸಿದ್ದಾರೆ. ಜೀವಕೋಶಗಳಂತೆ ಅದು ಕೂಡ (ATP) ಅಣುವಿನಿಂದ ಶಕ್ತಿ ಪಡೆದು ಗ್ರಹಿಸುವುದು ವಿಶೇಷವಾದ ಸಂಗತಿ.

ಇಂತಹ ರೋಬಟ್ ಸರ್ಜನ್‌ಗಳು ಆಸ್ಪತ್ರೆಗಳು ಕಾಲಿಡುವ ದಿನ ಹತ್ತಿರದಲ್ಲಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...