Home / ಕಥೆ / ಕಿರು ಕಥೆ / ಶ್ರೀಮಂತ ಬಡವರು

ಶ್ರೀಮಂತ ಬಡವರು

ಆಗರ್ಭ ಶ್ರೀಮಂತರ ಮಗಳಾಕೆ. ದಿನಾಲು ಶಾಲೆಗೆ ಕಾರಿನಲ್ಲಿ ಬಂದು ಹೋಗುವಳು. ಅವಳ ಚೆಂದದ ಪಾದಗಳಿಗೆ ಒಮ್ಮೆಯೂ ಮಣ್ಣು ತಗುಲಿರಲಿಲ್ಲ. ಮೈ ನೆಲದ ಸ್ಪರ್ಶ ಅನುಭವಿಸಿರಲಿಲ್ಲ. ಅವಳಿಗೆ ಬೇಕೆನೆಸಿದ್ದೆಲ್ಲ ಕ್ಷಣ ಮಾತ್ರದಲ್ಲಿ ದಕ್ಕುತ್ತಿತ್ತು. ಮಕಮಲ್ಲಿನ ಬಟ್ಟೆಯಂತಿತ್ತು ಅವಳ ಬದುಕು.

ಶಾಲೆಯಲ್ಲೂ ಅಷ್ಟೆ. ಅವಳಿಗೆ ಸ್ಪೆಷಲ್ಲಾಗಿ ಅಸನದ ವ್ಯವಸ್ಥೆ. ಎಲ್ಲರ ನಡವಳಿಕೆಗಳು ಅವಳಿಗೆ ಹಿತವೆನಿಸಿದ್ದವು. ಗೊಂಬೆಯಂತೆ ಕಾಣುತ್ತಿದ್ದ ಅವಳನ್ನು ಸಹಪಾಟಿಗಳು ಅದ್ಭುತವೆನ್ನುವಂತೆ ನೋಡುತ್ತಿದ್ದರು, ಮಾತನಾಡಲು ತವಕಿಸುತ್ತಿದ್ದರು.

ಒಂದಿನ ಒಬ್ಬ ಅಧ್ಯಾಪಕರು “ನಮ್ಮ ದೇಶದ ಬಡವರು” ಎಂಬ ವಿಷಯ ಕುರಿತು ಪ್ರಬಂಧ ಬರೆದುಕೊಂಡು ಬರಲು ಹೇಳಿದರು. ಮರುದಿನ ಎಲ್ಲರ ಪ್ರಬಂಧಗಳು ಅಧ್ಯಾಪಕರ ಕೈ ಸೇರಿದ್ದವು. ಎಲ್ಲ ವಿದ್ಯಾರ್ಥಿಗಳಿಗಿಂತ ಶ್ರೀಮಂತ ಹುಡುಗಿಯ ಪ್ರಬಂಧ ವಿಶೇಷವಾಗಿತ್ತು.

ಆಕೆ ಸುಂದರ ಅಕ್ಷರಗಳಲ್ಲಿ ನೀಟಾಗಿ ಬರೆದಿದ್ದಳು.

“ನಮ್ಮ ದೇಶದ ಬಡವರು ದೊಡ್ಡ ಬಂಗಲೆಗಳಲ್ಲಿ ವಾಸಿಸುವರು. ಅವರು ಕಾರಿನಲ್ಲಿ ಓಡಾಡುವರು. ಟಬ್‌ನಲ್ಲಿ ಸ್ನಾನ ಮಾಡುವರು. ಡೈನಿಂಗ್ ಟೇಬಲ್ ಮೇಲೆ ಕುಳಿತು ಟಿಫಿನ್, ಊಟ ಮಾಡುವರು. ಬ್ರೆಡ್ ಟೋಸ್ಟ್, ಬೆಣ್ಣೆ ದೋಸೆ, ಸಮೋಸಾ, ಪೇಡೆ, ಬರ್ಫಿ, ಗುಲಾಬ್ ಜಾಮೂನು ತಿನ್ನುವರು. ಹೋಳಿಗೆ, ತುಪ್ಪ, ಚಪಾತಿ, ಚಿತ್ರಾನ್ನ ಕೆನೆ ಮೊಸರು ಊಟ ಮಾಡುವರು. ಮುಂಜಾನೆ ಮತ್ತು ಸಂಜೆ ಗಟ್ಟಿಯಾದ ಹಾಲಿನ ಚಹ ಕುಡಿಯುವರು. ಸೇಬು, ಬಾಳೆಹಣ್ಣು, ದಾಳಂಬರಿ, ಕಿತ್ತಳೆ, ಮೋಸಂಬಿ, ಮಾವಿನ ಹಣ್ಣು, ದ್ರಾಕ್ಷಿ ಹಣ್ಣು ತಿನ್ನುವರು. ಬಿಸಲೇರಿ ನೀರು ಕುಡಿಯುವರು. ಟಿ.ವಿ. ನೋಡುವರು, ಮೆತ್ತನೆಯ ಮಂಚದ ಮೇಲೆ ಸೊಳ್ಳೆಪರದೆ ಕಟ್ಟಿಕೊಂಡು ಮಲಗುವರು. ನಸುಕಿನಲ್ಲೆದ್ದು ವಾಕಿಂಗ್ ಹೋಗುವರು, ಜಾಗಿಂಗ್ ಮಾಡುವರು….. ಇತ್ಯಾದಿ ಇತ್ಯಾದಿಯಾಗಿ ಪ್ರಬಂಧ ಮುಂದುವರಿದಿತ್ತು.

ಅಧ್ಯಾಪಕರಿಗೆ ಸುಸ್ತೋ ಸುಸ್ತು.

*****

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...