Home / ಕಥೆ / ಕಿರು ಕಥೆ / ನಕ್ಕಾಂವ ಗೆದ್ದಾಂವ

ನಕ್ಕಾಂವ ಗೆದ್ದಾಂವ

ಪತ್ರಕರ್ತನೊಬ್ಬ ಆ ಕಲಾವಿದನನ್ನು ಸಂದರ್ಶಿಸಲು ಬಂದ. ರಂಗಭೂಮಿ ಮತ್ತು ಸಿನಿಮಾ ಎರಡರಲ್ಲೂ ತನ್ನ ಹಾಸ್ಯ ನಟನೆಯಿಂದ ಪ್ರಖ್ಯಾತಿ ಪಡೆದ ಕಲಾವಿದನ ಎದುರು ಕುಳಿತು ನೇರವಾಗಿ ಮಾತಿಗಿಳಿದ:

“ನಿಮಗೆ ನಗಿಸುವ ಕಲೆ ಹೇಗೆ ಕರಗತವಾಯಿತು?”

“ದುಃಖದ ಕಡಲಲ್ಲಿ ಮುಳುಮುಳುಗಿ ಎದ್ದಿದ್ದರಿಂದ” ಕಲಾವಿದ ಉತ್ತರಿಸಿದ.

“ನೀವು ಅಳುವ ಪಾತ್ರಗಳನ್ನು ಮಾಡಲೇ ಇಲ್ಲ.”

“ಅಳುವವರನ್ನು ಈ ಜಗತ್ತು ಇಷ್ಟ ಪಡುವುದಿಲ್ಲ.”

“ನಿಮ್ಮ ನಗೆಯ ಹಿಂದೆ ನೋವು ಅಡಗಿರುವುದೆಂದು ಅನುಮಾನ ನನಗೆ.”

“ಆ ನೋವು ನನ್ನದು. ಅದು ನನ್ನೊಂದಿಗೆ ಕೊನೆಯಾಗುವುದು.”

“ದುಃಖವನ್ನು ಪ್ರಪಂಚದೊಂದಿಗೆ ಹಂಚಿಕೊಂಡರೆ ನೆಮ್ಮದಿ ಅನಿಸುವುದು.”

“ಜನರು ಯಾವಾಗಲೂ ಸಂತೋಷದ ಸಂಗತಿಗಳನ್ನು ಬಯಸುತ್ತಾರೆ. ಅವರೆದೆಗೆ ಸಂಕಟದ ಕಣ್ಣೀರು ಬಸಿದು ತಳಮಳಿಸುವ ಇಚ್ಛೆ ಇಲ್ಲ.”

“ನಿಮ್ಮ ಮಗನೊಬ್ಬ ಕಾರು ಅಪಘಾತದಲ್ಲಿ ತೀರಿಕೊಂಡನೆಂದು ಕೇಳಿದೆ.”

“ವಯಸ್ಸಿಗೆ ಬಂದ ಒಬ್ಬನೇ ಮಗನಿಗೆ ಕಿಚ್ಚು ಇಟ್ಟೆ. ಒಬ್ಬ ಮಗಳು ಅಳಿಯನಿಂದ ಸುಡಿಸಿಕೊಂಡು ಬೂದಿಯಾದಳು. ಎರಡನೆಯ ಮಗಳು ಕಾರು ಡ್ರೈವರ್‌ನೊಂದಿಗೆ ಓಡಿಹೋದಳು. ಮೊದಲ ಹೆಂಡತಿ ಕ್ಯಾನ್ಸರ್‌ನಿಂದ ಸತ್ತಳು. ನನ್ನನ್ನೇ ಪ್ರೀಮಿಸುವ ನಾಟಕವಾಡಿ ಬಂದ ಸತಿ ಶಿರೋಮಣಿ ನನ್ನ ಸಂಪತ್ತು ದೋಚಿಕೊಂಡು ಪರಾರಿಯಾದಳು. ಕೆಲವು ನಿರ್ಮಾಪಕರು ನನಗೆ ಹಣ ಕೊಡದೆ ವಂಚಿಸಿದರು. ಆದರೂ ದೇವರು ನನ್ನನ್ನು ಉಳಿಸಿದ್ದಾನೆ. ಬಹುಶಃ ಲೋಕದ ದುಃಖಿತರನ್ನು ನಗಿಸಲೆಂದೇ ಇರಬೇಕು” ಪಕಪಕನೆ ನಕ್ಕ ಕಲಾವಿದ.

“ನಿಮ್ಮ ಸಹನೆ ಅದ್ಭುತ”

“ಬದುಕಿನ ಪ್ರೀತಿ ಇದ್ದವರಿಗೆ ಸಮಾಧಾನವೂ ಇರಬೇಕು. ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ರಂಗಭೂಮಿಯಲ್ಲಿ ದುಡಿದಿದ್ದೇನೆ. ಜನರು ನನ್ನ ನಗೆಯಿಂದ ಸಂತೋಷ ಪಡುತ್ತಾರೆ. ಅವರಿಂದ ನನಗೆ ತೃಪ್ತಿಯಿದೆ”.

“ಕೊನೆಗೊಂದು ಪ್ರಶ್ನೆ. ನಾಡಿಗೆ ನಿಮ್ಮ ಸಂದೇಶವೇನು?”

“ನಾನು ಮಹಾತ್ಮನಲ್ಲ, ಪವಾಡಪುರುಷನೂ ಅಲ್ಲ, ದೇವರು ನನಗೆ ನಗಿಸುವ ಕಲೆ ಕೊಟ್ಟಿದ್ದಾನೆ. ಈ ಜೀವ ಇರುವತನಕ ಅಳುವವರನ್ನು ನಾನು ನಗಿಸುತ್ತಲೇ ಇರುತ್ತೇನೆ. ಕವಿಯೊಬ್ಬರು ಹೇಳಿದ್ದಾರೆ ನಕ್ಕಾವ ಗೆದ್ದಾಂವ ಅಂತ. ಅಳುವವರಿಗೆ ಇಲ್ಲಿ ಬದುಕಿಲ್ಲ” ಮತ್ತೆ ನಕ್ಕ ಕಲಾವಿದ.

 

Tagged:

Leave a Reply

Your email address will not be published. Required fields are marked *

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...