Home / ಕಥೆ / ಕಿರು ಕಥೆ / ನಕ್ಕಾಂವ ಗೆದ್ದಾಂವ

ನಕ್ಕಾಂವ ಗೆದ್ದಾಂವ

ಪತ್ರಕರ್ತನೊಬ್ಬ ಆ ಕಲಾವಿದನನ್ನು ಸಂದರ್ಶಿಸಲು ಬಂದ. ರಂಗಭೂಮಿ ಮತ್ತು ಸಿನಿಮಾ ಎರಡರಲ್ಲೂ ತನ್ನ ಹಾಸ್ಯ ನಟನೆಯಿಂದ ಪ್ರಖ್ಯಾತಿ ಪಡೆದ ಕಲಾವಿದನ ಎದುರು ಕುಳಿತು ನೇರವಾಗಿ ಮಾತಿಗಿಳಿದ:

“ನಿಮಗೆ ನಗಿಸುವ ಕಲೆ ಹೇಗೆ ಕರಗತವಾಯಿತು?”

“ದುಃಖದ ಕಡಲಲ್ಲಿ ಮುಳುಮುಳುಗಿ ಎದ್ದಿದ್ದರಿಂದ” ಕಲಾವಿದ ಉತ್ತರಿಸಿದ.

“ನೀವು ಅಳುವ ಪಾತ್ರಗಳನ್ನು ಮಾಡಲೇ ಇಲ್ಲ.”

“ಅಳುವವರನ್ನು ಈ ಜಗತ್ತು ಇಷ್ಟ ಪಡುವುದಿಲ್ಲ.”

“ನಿಮ್ಮ ನಗೆಯ ಹಿಂದೆ ನೋವು ಅಡಗಿರುವುದೆಂದು ಅನುಮಾನ ನನಗೆ.”

“ಆ ನೋವು ನನ್ನದು. ಅದು ನನ್ನೊಂದಿಗೆ ಕೊನೆಯಾಗುವುದು.”

“ದುಃಖವನ್ನು ಪ್ರಪಂಚದೊಂದಿಗೆ ಹಂಚಿಕೊಂಡರೆ ನೆಮ್ಮದಿ ಅನಿಸುವುದು.”

“ಜನರು ಯಾವಾಗಲೂ ಸಂತೋಷದ ಸಂಗತಿಗಳನ್ನು ಬಯಸುತ್ತಾರೆ. ಅವರೆದೆಗೆ ಸಂಕಟದ ಕಣ್ಣೀರು ಬಸಿದು ತಳಮಳಿಸುವ ಇಚ್ಛೆ ಇಲ್ಲ.”

“ನಿಮ್ಮ ಮಗನೊಬ್ಬ ಕಾರು ಅಪಘಾತದಲ್ಲಿ ತೀರಿಕೊಂಡನೆಂದು ಕೇಳಿದೆ.”

“ವಯಸ್ಸಿಗೆ ಬಂದ ಒಬ್ಬನೇ ಮಗನಿಗೆ ಕಿಚ್ಚು ಇಟ್ಟೆ. ಒಬ್ಬ ಮಗಳು ಅಳಿಯನಿಂದ ಸುಡಿಸಿಕೊಂಡು ಬೂದಿಯಾದಳು. ಎರಡನೆಯ ಮಗಳು ಕಾರು ಡ್ರೈವರ್‌ನೊಂದಿಗೆ ಓಡಿಹೋದಳು. ಮೊದಲ ಹೆಂಡತಿ ಕ್ಯಾನ್ಸರ್‌ನಿಂದ ಸತ್ತಳು. ನನ್ನನ್ನೇ ಪ್ರೀಮಿಸುವ ನಾಟಕವಾಡಿ ಬಂದ ಸತಿ ಶಿರೋಮಣಿ ನನ್ನ ಸಂಪತ್ತು ದೋಚಿಕೊಂಡು ಪರಾರಿಯಾದಳು. ಕೆಲವು ನಿರ್ಮಾಪಕರು ನನಗೆ ಹಣ ಕೊಡದೆ ವಂಚಿಸಿದರು. ಆದರೂ ದೇವರು ನನ್ನನ್ನು ಉಳಿಸಿದ್ದಾನೆ. ಬಹುಶಃ ಲೋಕದ ದುಃಖಿತರನ್ನು ನಗಿಸಲೆಂದೇ ಇರಬೇಕು” ಪಕಪಕನೆ ನಕ್ಕ ಕಲಾವಿದ.

“ನಿಮ್ಮ ಸಹನೆ ಅದ್ಭುತ”

“ಬದುಕಿನ ಪ್ರೀತಿ ಇದ್ದವರಿಗೆ ಸಮಾಧಾನವೂ ಇರಬೇಕು. ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ರಂಗಭೂಮಿಯಲ್ಲಿ ದುಡಿದಿದ್ದೇನೆ. ಜನರು ನನ್ನ ನಗೆಯಿಂದ ಸಂತೋಷ ಪಡುತ್ತಾರೆ. ಅವರಿಂದ ನನಗೆ ತೃಪ್ತಿಯಿದೆ”.

“ಕೊನೆಗೊಂದು ಪ್ರಶ್ನೆ. ನಾಡಿಗೆ ನಿಮ್ಮ ಸಂದೇಶವೇನು?”

“ನಾನು ಮಹಾತ್ಮನಲ್ಲ, ಪವಾಡಪುರುಷನೂ ಅಲ್ಲ, ದೇವರು ನನಗೆ ನಗಿಸುವ ಕಲೆ ಕೊಟ್ಟಿದ್ದಾನೆ. ಈ ಜೀವ ಇರುವತನಕ ಅಳುವವರನ್ನು ನಾನು ನಗಿಸುತ್ತಲೇ ಇರುತ್ತೇನೆ. ಕವಿಯೊಬ್ಬರು ಹೇಳಿದ್ದಾರೆ ನಕ್ಕಾವ ಗೆದ್ದಾಂವ ಅಂತ. ಅಳುವವರಿಗೆ ಇಲ್ಲಿ ಬದುಕಿಲ್ಲ” ಮತ್ತೆ ನಕ್ಕ ಕಲಾವಿದ.

 

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...