Home / ಕವನ / ಕವಿತೆ / ಪಾರಿಜಾತ

ಪಾರಿಜಾತ

ಇನಿತೊಂದು ವಾಸನೆಯ ನಿನಗಾರು ಇತ್ತರು ?
ನಿನ್ನ ಕಂಡವರೆಲ್ಲರ ಕೆಳೆಬೆಳೆಸಿ ಸೆಳೆಯಲು
ನಿನ್ನಯಾ ಮುಡಿಬಯಸುತಿರಲಿನಿಯರು
ಉನ್ನತದಲಿಹ ಮೃಡ ಬಿಡದೆ ಕೊಂಡೊಯ್ವನು

ನಿನ್ನಯಾ ಗಮಗಮಿಸುವಾ ಸೊಗಸನೀವ-
ಸುತ್ತು ತುಂಬುತಿಹ ಪರಿಮಳವು
ಅನಿಲನಾ ಒಡನೆ ಸುಳಿಸುಳಿದು ಬರುವಾಗ
ಎನ್ನನ್ನು ಮರೆಸಿತ್ತು; ನಲವಿನಲಿ ನಿಲಿಸಿತ್ತು

ನಿನ್ನ ಯಾಡಂಬರಕೆ ಮರುಳಾಯಿತೋ ಮನವು
ನಾನೇನು ನರನಹುದು! ನಿನಗಿದೇನು ?
ಆ ನೀಲಧರನೇ ನಿನಗಾಗಿ ಕರೆವಾಗ
ನಿನ್ನ ಬಲು ಜಂಭ ಹರನ ತಲೆಯೊಳಾಯ್ತು

ನಾನೇಕೆ; ಹರನೇಕೆ; ಅನ್ಯರಿನ್ನೇಕೆ ?
ಕಾನನದ ಸರ್ಪಗಳೂ ನಿನಗೆರಗಬೇಕೆ ?
ನಿನ್ನನ್ನು ಅರಸರಸಿ ಓಡಿಬರಬೇಕೆ ?
ನಿನ್ನಲ್ಲಿಯೇ ಸರ್ಪ ಬೀಡು ಬಿಡಬೇಕೆ ?

ಸತ್ವರೂ ಅಲ್ಲದೇ ರಜ ತಮಸರು
ತತ್ವಬಲ್ಲಾ ತಾತ್ವಿಕರು, ಯತಿವರರು
ತತ್ತರಿಪ ಕಾಮಿಗಳು, ನರಹರರು
ಮುತ್ತಿಹರು; ತಮ್ಮನ್ನು ಮರೆತಿಹರು

ಪಾರಿಜಾತವೆಂದು ತಾ ನಿನ್ನ ಹೆಸರೇ ?
ಪರಿಪರಿಯ ಪರಿಮಳ ನಿನ್ನ ಉಸಿರೇ ?
ಸುರನರಪಾಮರರು ನಿನ್ನ ಬಲೆಯಲಿಹರೇ?
ಪರಿಮಳದ ಆಗರವು ನೀ ಪಾರಿಜಾತೇ ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...