Home / ಕವನ / ಕವಿತೆ / ದ್ವಂದ್ವದಾಟ

ದ್ವಂದ್ವದಾಟ

ತಂಗಾಳಿ ಬೀರಿದೆ, ಬಿರುಗಾಳಿ ಬೀಸಿದೆ
ಜಗವೆಲ್ಲ ನಲಿದಿದೆ, ಅಳುವಿನಲ್ಲಿ ಮುಳುಗಿದೆ
ಗಗನ ಹೊಳೆದಿದೇ, ಮೇಘ ಮುತ್ತಿದೆ
ಮೊಗವೊಂದು ಬಾಡಿದೆ, ಮತ್ತೊಂದು ಅರಳಿದೆ

ಅತ್ತ ಮರಣ-ಇತ್ತ ಜನನ; ಇಳೆಯೊಳೆಲ್ಲೆಡೆ
ಕತ್ತಲಂತೆ ಬೆಳಕಂತೆ ಎರಡು ಕೂಡಿವೆ
ತುತ್ತೊಂದೆಡೆ ಹೊಟ್ಟೆಗಿಲ್ಲ, ಮೃಷ್ಟಾನ್ನವೊಂದೆಡೆ
ಅತ್ತ ಹಾಗೆ, ಇತ್ತ ಹೀಗೆ ಜಗವ ತೂಗಿದೆ

ತಾಮಸರು ನಿಂದಿಹರು, ಸುರಜನರು ಬ೦ದಿಹರು
ಕಿಕ್ಕಿರಿದ ಜಗತುಂಬ ಪುಣ್ಯ ಪಾಪಂತೆ
ಮುಕ್ಕರಿಪ- ಎಚ್ಚರಿಪ ಜನರೆಲ್ಲರಿಲ್ಲಿಹರು
ಇಕ್ಕೆಲದ ಜನವೆಲ್ಲ ಜಗವನ್ನೇ ಜೈಸಿದೆ

ಬ್ರಹ್ಮಚರ್ಯ-ಕಾಮಚರ್ಯ ಎಲ್ಲ ನಡೆದಿವೆ
ಸುತ್ತೆಲ್ಲಾ ರಣಕಹಳೆ, ನಡುವಿದೆ ಶಾಂತಿ ಹೊಳೆ
ಧರ್ಮ-ಕರ್ಮ-ದುಷ್ಕರ್ಮ ಕೂಡಿ ಬಾಳಿವೆ
-ಮಿಥ್ಯ ಎಲ್ಲ ಸೇರಿ ಸಮರಸದ ಜಡಿಮಳೆ

ದೇವಗುಡಿಯೊಂದು, ನಾಸ್ತಿಕ ನುಡಿ ಇನ್ನೊ೦ದು
ಬೇವು-ಬೆಲ್ಲ, ಶಿಗೆ-ಎಣ್ಣೆ, ಅಬ್ಬ ತಾಕಲಾಟವೆ
ನೀವು-ನಾನು, ನೀನು-ನಾವು, ಮೇಲು-ಕೀಳು ಎಂದು
ಅವನು ಹೋಲೆಯನಿವನು ಒಡೆಯ; ಅಳುವೆ-ಬಾಳುವೆ

ಪ್ರಳಯ, ನಾಶ, ದುಃಖ, ನರಕ ಸೊಕ್ಕಿನಿಂದ ನಕ್ಕಿವೆ
ಬೆಳವು, ಉಳಿವು, ಸಿರಿಯು, ಸರ್ಗ ಎಲ್ಲ ಉಕ್ಕಿವೆ
ಏಳು-ಬೀಳು, ದಿಬ್ಬ-ತಗ್ಗು, ಇರುಳು-ಹಗಲು ಸೇರಿವೆ
ಸೆಳೆದು-ಎಳೆದು ಜನವನೆಲ್ಲಾ ಕಾಡಿ-ನೀಡಿ ನೋಡಿವೆ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...