Home / ಕವನ / ಕವಿತೆ / ಗುರುಸಿದ್ಧರಾಜಯೋಗೀಂದ್ರರ ಲಿಂಗೈಕ್ಯ

ಗುರುಸಿದ್ಧರಾಜಯೋಗೀಂದ್ರರ ಲಿಂಗೈಕ್ಯ

ಅಳುವಿರೇಕೆ ನೀವು, ಬಿಸಿಯುಸಿರು ನಿಮಗೇಕೆ?
ಕಣ್ಣೀರು ಸುರಿಸುವಿರಿ, ಎದೆತುಂಬಿ ಕುಸಿಯುವಿರಿ
ಕಣ್ಣು ಕೆಂಪಾಗಿಹುದಲ್ಲ! ಇನ್ನಳವು ಏಕೆ ?
ಅತ್ತು ಬಿಗಿದಿವೆ ಕ೦ಠ, ಮರೆಯಿರಿದೋ ದುಃಖದುರಿ

ನಿಮ್ಮಳವು ನನಗಿರದೇ ? ಸಾವು ನಮ್ಮೆಲ್ಲರದು
ಮಣ್ಣು ಕೊಟ್ಟಿಹ ದೇಹ ಮಣ್ಣಿಗರ್ಪಿತವಹುದು
ಮಣ್ಣಿಗೆ ಮರೆತು ಅನ್ನುವೆವು ‘ನಾವು’ ಎಂದು
ದೇಹ ನಾವಲ್ಲ; ಮಣ್ಣಹುದು, ಮಣ್ಣು ಮಣ್ಣಿಗಾಗಿಹುದು

ನೀವು ಗಳಿಸಿದ ದೀಪ ಮೂರುಸಾವಿರ ದೀಪ
ಆ ದೀಪ ಕಿರಿಯಹುದೇ? ಕೊನೆಯಹುದೇ? ಹೇಳಿ
ಆರದಾ ದೀಪ ಗುರುಸಿದ್ಧ ನಂದಾದೀಪ
ಗುರುಸಿದ್ಧದೇವರಳಿದಿಲ್ಲ; ಅಳಿದುದವರ ದೇಹ ಕೇಳಿ

ಗಂಗಾಧರ ವಾಣಿಜ್ಯ ವಿದ್ಯಾಲಯದ ವಾಣಿಯವರು
ಶಾರದೆಯ ವೀಣೆಯದೋ ನುಡಿಸಿತವರ ಕೃಪಾ ಸುಧೆ
ಕಾಡಸಿದ್ಧೇಶ್ವರನ ಗುರುಸಿದ್ಧನಾಶ್ರಯಿಸಿಹನು
ಅತನು ಬೆಳೆಯುತೆ; ಆಶ್ರಯದಾತನಳಿಯಬಹುದೇ?

ಕಿರಿಯರಿಗೆ ಹಿರಿಯರಿಗೆ ನೀಡಿತವರ ಕಾಮಧೇನು ಕರವು
ವಿದ್ಯೆಯನು, ಬುದ್ಧಿಯನು, ಪುಣ್ಯವನ್ನು ಧರೆಯೊಳು
ನಾವುಂಡ ಅಂಮೃತದಲಿ ಅವರಾತ್ಮ ಕಾಣುವೆವು
ಅವರ ತತ್ವ ಕಳೆ ಏರಿ ಬೆಳೆಯುತ್ತಿದೆ ಭುವಿಯೊಳು

ಶಿವಯೋಗ ದಿನದಂದು ಗುರುಸಿದ್ಧ ಶಿವಯೋಗಿ
ಶಿವನೊಳೊಂದಾಗಿ ಗಂಗಾಧರ ಶಿವಯೋಗಿ ರೂಪತಾಳಿದರು
ಮೂರುಸಾವಿರ ಮಠದ ಸರ್ವಭಕ್ತರಿಗೆ ಆಶೀರ್ವದಿಸಿ
ರಾಜೇಂದ್ರಯೋಗಿಯದೋ ನಿಜಸಾಕ್ಷಾತ್ಕಾರ ತೋರುತಿಹರು
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...