Home / ಕಥೆ / ಕಿರು ಕಥೆ / ಹರಕೆಯ ಕುರಿ

ಹರಕೆಯ ಕುರಿ

ಚಿತ್ರ: ಪಿಕ್ಸಾಬೇ
ಚಿತ್ರ: ಪಿಕ್ಸಾಬೇ

ಕುಟುಂಬದ ಯಜಮಾನನೊಬ್ಬ ಹರಕೆಯೊಂದನ್ನು ಹೊತ್ತಿದ್ದ. ಬಹಳ ದಿನದ ಹರಕೆಯದು. ಮೆನಯ ಕುಲದೇವರಿಗೆ ಕುರಿಯೊಂದನ್ನು ಅವನು ಬಲಿಕೊಡಬೇಕಾಗಿತ್ತು. ಅದಕ್ಕಾಗಿ ಅವನು ಕುರಿಮರಿಯೊಂದನ್ನು ಸಾಕುತ್ತ ಬಂದಿದ್ದ. ಕುರಿ ಸೊಪ್ಪು ಮೇಯ್ದು ದಷ್ಟಪುಷ್ಟವಾಗಿತ್ತು.

ಕುಲದೇವರು ನೆಲೆಸಿರುವ ಊರಿಗೆ ಹೊರಡುವ ಸಿದ್ಧತೆಯಾಯಿತು. ಮಿನಿ ಟ್ರಕ್ಕು ಬಂದು ಮನೆಯ ಮುಂದೆ ನಿಂತಿತು. ಯಜಮಾನನ ಮನೆಯ ಜನ, ಬಂಧು, ಬಳಗ, ಆಪ್ತವಲಯದವರು ಟ್ರಕ್ಕು ಏರಿದರು. ಅವರ ನಡುವೆ ಹರಕೆಯ ಕುರಿ, ಕುಳಿತವರು ಅದನ್ನು ಭಕ್ತಿಯಿಂದ ಗಮನಿಸುತ್ತಿದ್ದರು.

ಸಂಭ್ರಮದಿಂದ ಚಲಿಸುತ್ತಿತ್ತು ಗಾಡಿ. ಕೆಲವರು ಮಾತಿನ ಲಹರಿಯಲ್ಲಿ ಕಳೆದು ಹೋಗಿದ್ದರು. ಪ್ರಾಯದ ಹುಡುಗ-ಹುಡುಗಿಯರು, ಹಾಡು, ಹಾಸ್ಯ, ಕೇಕೆಯಲ್ಲಿ ತನ್ಮಯರಾಗಿದ್ದರು. ಆಗಾಗ ದೇವರ ಉಘೇ ಉಘೇ ಉದ್ಘೋಷವೂ ಮೊಳಗುತ್ತಿತ್ತು.

ತವಕ ತಲ್ಲಣದಲ್ಲಿ ಹರಕೆಯ ಕುರಿ ದಟ್ಟ ಮೌನ ಧರಿಸಿ ನಿಂತಿತ್ತು. ಜನರ ಉತ್ಸಾಹ ನನ್ನ ಬಲಿಯ ದ್ಯೋತಕವೆಂದು ಕುರಿಗೆ ಮನದಟ್ಟಾಗಿತ್ತು. ಆಗಾಗ ಅದು ಅಸಹಾಯಕವಾಗಿ ನಿಟ್ಟುಸಿರು ಚೆಲ್ಲುತ್ತಿತ್ತು. ತಮ್ಮ ಹಿತಕ್ಕಾಗಿ ದುರ್ಬಲ ಪ್ರಾಣಿಗಳನ್ನು ಬಲಿಕೊಟ್ಟು ದೇವರು, ಧರ್ಮಗಳನ್ನು ದುರುಪಯೋಗ ಪಡಿಸಿಕೊಳ್ಳುವ ಜನರ ಹುನ್ನಾರಗಳಿಗೆ ಕುರಿ ಮೂಕವಾಗಿ ರೋಧಿಸುತೊಡಗಿತ್ತು.

ಗಾಡಿ ರಸ್ತೆಯುದ್ದಕ್ಕೂ ವೇಗವಾಗಿ ಓಡತೊಡಗಿತ್ತು. ಅದರೊಂದಿಗೆ ಸ್ಪರ್ಧೆಗಿಳಿದಂತೆ ಜನರ ಹರ್ಷೋದ್ಗಾರ.

ಒಮ್ಮೆಲೆ ಧಡಲ್ ಎಂಬ ಸದ್ದು!

ಎದುರಿಗೆ ಬಂದ ಭೂತಾಕಾರದ ಟ್ರಕ್ಕೊಂದು ಮಿನಿಲಾರಿಗೆ ಭಯಂಕರವಾಗಿ ಡಿಕ್ಕಿ ಹೊಡೆದು ಪಕ್ಕದ ಕಮರಿಗೆ ನೂಕಿತ್ತು.

ಹಾಹಾಕಾರ, ಚೀತ್ಕಾರ, ನರಳಾಟ, ರಕ್ತದ ಕೋಡಿ.

ಲಾರಿ ಪುಡಿಪುಡಿಯಾಯಿತು, ಅದರೊಳಗಿದ್ದವರು ಒಬ್ಬರೂ ಉಳಿಯಲಿಲ್ಲ.

ದಿಬ್ಬದ ಮೇಲೆ ನಿಂತ ಹರಕೆಯ ಕುರಿ ಮಾತ್ರ ಬ್ಯಾ…. ಬ್ಯಾ…. ಎನ್ನತೊಡಗಿತ್ತು.

 

Tagged:

Leave a Reply

Your email address will not be published. Required fields are marked *

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...