Home / ಕಥೆ / ಕಿರು ಕಥೆ / ಹರಕೆಯ ಕುರಿ

ಹರಕೆಯ ಕುರಿ

ಚಿತ್ರ: ಪಿಕ್ಸಾಬೇ
ಚಿತ್ರ: ಪಿಕ್ಸಾಬೇ

ಕುಟುಂಬದ ಯಜಮಾನನೊಬ್ಬ ಹರಕೆಯೊಂದನ್ನು ಹೊತ್ತಿದ್ದ. ಬಹಳ ದಿನದ ಹರಕೆಯದು. ಮೆನಯ ಕುಲದೇವರಿಗೆ ಕುರಿಯೊಂದನ್ನು ಅವನು ಬಲಿಕೊಡಬೇಕಾಗಿತ್ತು. ಅದಕ್ಕಾಗಿ ಅವನು ಕುರಿಮರಿಯೊಂದನ್ನು ಸಾಕುತ್ತ ಬಂದಿದ್ದ. ಕುರಿ ಸೊಪ್ಪು ಮೇಯ್ದು ದಷ್ಟಪುಷ್ಟವಾಗಿತ್ತು.

ಕುಲದೇವರು ನೆಲೆಸಿರುವ ಊರಿಗೆ ಹೊರಡುವ ಸಿದ್ಧತೆಯಾಯಿತು. ಮಿನಿ ಟ್ರಕ್ಕು ಬಂದು ಮನೆಯ ಮುಂದೆ ನಿಂತಿತು. ಯಜಮಾನನ ಮನೆಯ ಜನ, ಬಂಧು, ಬಳಗ, ಆಪ್ತವಲಯದವರು ಟ್ರಕ್ಕು ಏರಿದರು. ಅವರ ನಡುವೆ ಹರಕೆಯ ಕುರಿ, ಕುಳಿತವರು ಅದನ್ನು ಭಕ್ತಿಯಿಂದ ಗಮನಿಸುತ್ತಿದ್ದರು.

ಸಂಭ್ರಮದಿಂದ ಚಲಿಸುತ್ತಿತ್ತು ಗಾಡಿ. ಕೆಲವರು ಮಾತಿನ ಲಹರಿಯಲ್ಲಿ ಕಳೆದು ಹೋಗಿದ್ದರು. ಪ್ರಾಯದ ಹುಡುಗ-ಹುಡುಗಿಯರು, ಹಾಡು, ಹಾಸ್ಯ, ಕೇಕೆಯಲ್ಲಿ ತನ್ಮಯರಾಗಿದ್ದರು. ಆಗಾಗ ದೇವರ ಉಘೇ ಉಘೇ ಉದ್ಘೋಷವೂ ಮೊಳಗುತ್ತಿತ್ತು.

ತವಕ ತಲ್ಲಣದಲ್ಲಿ ಹರಕೆಯ ಕುರಿ ದಟ್ಟ ಮೌನ ಧರಿಸಿ ನಿಂತಿತ್ತು. ಜನರ ಉತ್ಸಾಹ ನನ್ನ ಬಲಿಯ ದ್ಯೋತಕವೆಂದು ಕುರಿಗೆ ಮನದಟ್ಟಾಗಿತ್ತು. ಆಗಾಗ ಅದು ಅಸಹಾಯಕವಾಗಿ ನಿಟ್ಟುಸಿರು ಚೆಲ್ಲುತ್ತಿತ್ತು. ತಮ್ಮ ಹಿತಕ್ಕಾಗಿ ದುರ್ಬಲ ಪ್ರಾಣಿಗಳನ್ನು ಬಲಿಕೊಟ್ಟು ದೇವರು, ಧರ್ಮಗಳನ್ನು ದುರುಪಯೋಗ ಪಡಿಸಿಕೊಳ್ಳುವ ಜನರ ಹುನ್ನಾರಗಳಿಗೆ ಕುರಿ ಮೂಕವಾಗಿ ರೋಧಿಸುತೊಡಗಿತ್ತು.

ಗಾಡಿ ರಸ್ತೆಯುದ್ದಕ್ಕೂ ವೇಗವಾಗಿ ಓಡತೊಡಗಿತ್ತು. ಅದರೊಂದಿಗೆ ಸ್ಪರ್ಧೆಗಿಳಿದಂತೆ ಜನರ ಹರ್ಷೋದ್ಗಾರ.

ಒಮ್ಮೆಲೆ ಧಡಲ್ ಎಂಬ ಸದ್ದು!

ಎದುರಿಗೆ ಬಂದ ಭೂತಾಕಾರದ ಟ್ರಕ್ಕೊಂದು ಮಿನಿಲಾರಿಗೆ ಭಯಂಕರವಾಗಿ ಡಿಕ್ಕಿ ಹೊಡೆದು ಪಕ್ಕದ ಕಮರಿಗೆ ನೂಕಿತ್ತು.

ಹಾಹಾಕಾರ, ಚೀತ್ಕಾರ, ನರಳಾಟ, ರಕ್ತದ ಕೋಡಿ.

ಲಾರಿ ಪುಡಿಪುಡಿಯಾಯಿತು, ಅದರೊಳಗಿದ್ದವರು ಒಬ್ಬರೂ ಉಳಿಯಲಿಲ್ಲ.

ದಿಬ್ಬದ ಮೇಲೆ ನಿಂತ ಹರಕೆಯ ಕುರಿ ಮಾತ್ರ ಬ್ಯಾ…. ಬ್ಯಾ…. ಎನ್ನತೊಡಗಿತ್ತು.

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...