Home / ಲೇಖನ / ವಿಜ್ಞಾನ / ವಿಸ್ಮಯ ಜೀವ ಸೃಷ್ಟಿಯ ವಂಶಾಣು ವರ್ಗಾವಣೆ

ವಿಸ್ಮಯ ಜೀವ ಸೃಷ್ಟಿಯ ವಂಶಾಣು ವರ್ಗಾವಣೆ

ಚಿತ್ರ: ಕಾಲಿನ್ ಬೆಹ್ರೆನ್ಸ್

ಈಗಾಗಲೇ ತಂತ್ರಜ್ಞಾನದಿಂದ ಏನೆಲ್ಲ ವಿಸ್ಮಯಗಳ ಸೃಷ್ಟಿಯಾಗುತ್ತಲಿದೆ. ಮುಂದಿನ ಶತಮಾನದಲ್ಲಿ ನಂಬಲಸಾಧ್ಯವಾದ ಕೌತುಕಗಳನ್ನು ಪ್ರಕಟಿಸುತ್ತದೆ. ಹೊಸ ಪೀಳಿಗೆಯ ಹಸು, ಕುರಿ, ಕೋಳಿ ಇತ್ಯಾದಿಗಳನ್ನು ತಯಾರಿಸಬಹುದು. ಇವು ನೈಸರ್ಗಿಕವಾಗಿ ಜನಿಸಿದವಾಗಿರುವುದಿಲ್ಲ. ಮನುಷ್ಯನು ಇವುಗಳ ವಂಶಾಣುಗಳಲ್ಲಿ ವ್ಯತ್ಯಾಸಗಳನ್ನು ಮಾಡಿ ಕೃತಕವಾಗಿ ನಿರ್ಮಿಸಿದ ಪ್ರಾಣಿಗಳಾಗಿರಬಹುದು.

ಒಂದು ಪ್ರಾಣಿಯ ವಂಶಾಣುವಿನಲ್ಲಿ (Gene) ಪರಿವರ್ತನೆ ಮಾಡಿ ನಮಗೆ ಎಂತಹ ರೀತಿಯ ಹೊಸ ಪ್ರಾಣಿಗಳನ್ನು ತಯಾರಿಸಬಹುದು. ಉದಾ: ಬಕೆಟ್ ಗಟ್ಟಲೇ ಹಾಲು ಕರಿಯುವ ಹಸುಬೇಕೆಂದರೆ ವಂಶಾಣು ವರ್ಗಾವಣೆಯ (Transgenic) ತಂತ್ರಜ್ಞಾನದಿಂದ ಅಂತಹ ಹಸುಗಳನ್ನು ಸೃಷ್ಟಿಸಬಹುದು. ತಂತ್ರಜ್ಞಾನದಿಂದ ಬೆಳೆಸಿದ ಹತ್ತಿಯು ಪಾಲಿಯೆಸ್ಟರ್ ಸಂಯುಕ್ತವನ್ನು ಉತ್ಪಾದಿಸಬೇಕೆಂದರೆ ಹಾಗೂ ಮಾಡಬಹುದು. ಆಡಿನ ಹಾಲಿನಲ್ಲಿ ‘ಹಿಮೋಫೀಲಿಯಾ ಎಂಪಿಸೀಮಾ’ ರೋಗಗಳನ್ನು ನಿಯಂತ್ರಿಸುವ ಪದಾರ್ಥಗಳಿರುತ್ತವೆ.

ಅಮೇರಿಕಾದಲ್ಲಿ ರೈತರು ಮೂವತ್ತು ದಶಲಕ್ಷ ಎಕರೆ ಭೂಮಿಯಲ್ಲಿ ವಂಶಾಣು ವರ್ಗಾವಣೆ ಆಧಾರಿತ ಸಮಸ್ಯೆಗಳನ್ನು ಈಗಾಗಲೇ ಬೆಳೆಸುತ್ತಿದ್ದಾರೆ. ಬರಲಿರುವ ಕಾರ್ಖಾನೆಗಳಲ್ಲಿ ಜೈವಿಕ ತಂತ್ರಜ್ಞಾನಗಳನ್ನು ಬಳಸಿ ಅನೇಕ ಪ್ಲಾಸ್ಟಿಕ್‌ಗಳು, ಎಂಜೈಮ್‌ಗಳು, ಪರ್ಯಾಯ ಇಂಧನಗಳು ತಯಾರಾಗುತ್ತವೆ. ವಿಶಿಷ್ಟವಾದ ಮರಗಳಿಂದ ಉತ್ತಮ ಮಟ್ಟದ ಕಾಗದ ಪಲ್ಫ್ ತಯಾರಾಗುವುದು ಕ್ಯಾಲಿಫೋರ್ನಿಯಾದ ಸಂಸ್ಥೆಯೊಂದು ಸಾಬೂನಿಗೆ ಬೇಕಾಗುವ ವಿಶಿಷ್ಟ ಬೀಜಗಳನ್ನು ತಯಾರಿಸುತ್ತದೆ. ವಂಶಾಣುವರ್ಗಾವಣೆಯ ತಂತ್ರಜ್ಞಾನವು ಔಷಧ ಶಾಸ್ತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುತ್ತಲಿದೆ. ವರ್ಜಿನೀಯಾದ ಪಾಲಿಟೆಕಕ್ನಿಕ್ ಇನ್ಸ್‍ಟ್ಯೂಟ್ ಅಂಡ್ ಸ್ಟೇಟ್ ಯುನಿವರ್ಸಿಟಿಯಲ್ಲಿ ತಯಾರಿಸಿದ ಹಂದಿಗಳ ಹಾಲಿನಲ್ಲಿ ಅನೇಕ ರೋಗ ನಿವಾರಕ ಗುಣಗಳಿವೆಯಂತೆ. ಮನುಷ್ಯರ ರಕ್ತ ಹೆಪ್ಪುಗಟ್ಟಿಸುವಿಕೆಗೆ ಬೇಕಾಗುವ ಪ್ರೋಟೀನು – ಸಿ ಉಸಿರಾಟದ ತೊಂದರೆಗಳನ್ನು ತೊಡೆದು ಹಾಕುವ ‘ಆಲ್ಫಾ-೧’ ಯಟಿಟ್ರಿ ಪ್ಸಿನ್‌ಗಳು ಅದರಲ್ಲಿವೆ. ಒಂದು ಹಂದಿ ಪ್ರತಿವರ್ಷಕ್ಕೆ ಕರೆಯುವ ೩೦೦ ಲೀಟರ್ ಹಾಲಿನಲ್ಲಿ
ಶೇಕಡಾ ಹತ್ತನೆ ಒಂದು ಭಾಗದಷ್ಟು ಪ್ರೋಟಿನ್ -ಸಿ ಇರುತ್ತದೆಂದು ಕಂಡು ಹಿಡಿಯಲಾಗಿದೆ. ಮ್ಯಾಸಾಚ್ಯೂಟ್ಸ್‌ ಜೆಂಜೈಮ್ ಟ್ರಾನ್ಸ್‌ಜೆನಿಕ್ಸ್ ಕಾರ್ಪೊರೇಶನ್‌ನಲ್ಲಿ ಅಭಿವೃದ್ಧಿ ಪಡಿಸಿದ ಆಡುಗಳ ಹಾಲಿನಲ್ಲಿ ಕೆಲವೊಂದು ಕ್ಯಾನ್ಸರ್‌ಗಳು, ಹೃದಯರೋಗ, ಚರ್ಮರೋಗ ಮತ್ತು ಇತರ ಅನೇಕ ರೋಗಗಳನ್ನು ಶಮನಗೊಳಿಸುವ ಗುಣಗಳಿವೆ, ಎಂದು ವರದಿಯಾಗಿದೆ.

ವಂಶಾಣುವರ್ಗಾವಣೆಯ ತಂತ್ರಜ್ಞಾನವು ಎಷ್ಟರ ಮಟ್ಟಿಗೆ ವರವಾಗುವುದೋ ಅಷ್ಟೇ ಶಾಪವಾಗಿ ಪರಿಣಮಿಸಬಹುದೆಂಬ ಆತಂಕ ವಿಜ್ಞಾನಿಗಳಿಗಿದೆ. ನಿಸರ್ಗದ ಜೀವ ಜಗತ್ತಿನ ಸಮತೋಲನವನ್ನು ಹಾಳುಮಾಡಬಹುದು ಎಂಬ ಭಯ ಅವರದು. ಇಷ್ಟಾದ್ದಾಗ್ಯೂ ಸಸ್ಯಗಳಿಂದ ಹೆಚ್ಚು ಅಗ್ಗವಾದ ಪದಾರ್ಥಗಳನ್ನು ತಯಾರಿಸಬಹುದೆಂದು ವಿಜ್ಞಾನಿಗಳು ಅಭಿಪ್ರಾಯ ಪಡುತ್ತಾರೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...