Home / ಕಥೆ / ಕಿರು ಕಥೆ / ದೇವರಿಗೆ ಬಿಟ್ಟಿದ್ದು

ದೇವರಿಗೆ ಬಿಟ್ಟಿದ್ದು

ಬಿರು ಬೇಸಿಗೆ ಒಂದು ಮಧ್ಯಾಹ್ನ ಪಾಟೀಲ್ ಸರ್‍ ಭೇಟಿಯಾದರು. ಹೊರ ಜಿಲ್ಲೆಯ ಹಳ್ಳಿಯ ಶಾಲೆಯೊಂದರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕವಾದ ನಂತರ ಅವರು ಕಂಡದ್ದು ಅದೇ ಮೊದಲು. ಉಭಯಕುಶಲೋಪರಿ ತರುವಾಯ ಹೊಟೇಲಿಗೆ ಹೋಗಿ ಕಾಫಿಗೆ ಆರ್ಡರ್‍ ಕೊಟ್ಟು ಪಾಟೀಲರನ್ನು ಕೇಳಿದೆ:

“ನಿಮ್ಮ ಶಿಕ್ಷಕ ವೃತಿ ಹೇಗೆ ನಡೆದಿದೆ?”
“ಬಹಳ ಆರಾಮಾಗಿದೆ” ಎಂದರು ಪಾಟೀಲ ಸರ್‍.
“ನಿಮ್ಮ ಶಾಲೆಯಲ್ಲಿ ಎಷ್ಟು ತರಗತಿಗಳಿವೆ?”
“ಒಂದರಿಂದ ಐದು”
“ಸ್ಟಾಫ್?”
“ಫುಲ್ ಇದೆ”.
“ಕಟ್ಟಡ?”
“ಬಾಗಿಲು, ಕಿಟಕಿ, ಸೂರಿನ ಹಂಚು ಪೂರ್ತಿ ಇಲ್ಲದಿದ್ದರೂ ಸ್ವಂತ ಕಟ್ಟಡ ಇದೆ.”
“ಮಕ್ಕಳ ಸಂಖ್ಯೆ?”
“ಸಾಕಷ್ಟಿದೆ.”
“ದಾಖಲಾತಿ…. ಹಾಜರಾತಿ?”
“ಹಾಜರಾತಿಯದೇ ಸಮಸ್ಯೆ.”
“ಉಚಿತ ಪುಸ್ತಕ, ಬಟ್ಟೆ, ಬಿಸಿಯೂಟ ವ್ಯವಸ್ಥೆ ಇಲ್ಲವೆ?”
“ಎಲ್ಲ ಅನುಕೂಲವೂ ಇದೆ.”
“ಹಾಗಾದರೆ ಮಕ್ಕಳ ಹಾಜರಾತಿ ಕಮ್ಮಿ ಏಕೆ?”
“ಊಟದ ವೇಳೆಯಲ್ಲಿ ಹಾಜರಾತಿ ಹೆಚ್ಚಿಗಿರುವುದು.”
“ಮಕ್ಕಳ ಕಲಿಕೆಯ ಮಟ್ಟ.”
“ಆರಕ್ಕೇರದು ಮೂರಕ್ಕಿಳಿಯದು.”
“ಈ ಬಗ್ಗೆ ಸಹೇಬರು ಗಮನ ಹರಿಸುವುದಿಲ್ಲವೆ?”
“ಮಕ್ಕಳು ಶಾಲೆಗೆ ಬರಲಿ ಬಿಡಲಿ ವಾರ್ಷಿಕ ಪರೀಕ್ಷೆಯಲ್ಲಿ ಅವರೆಲ್ಲ ಪಾಸು.”
“ಓದು – ಬರಹ ಇಲ್ಲದೆ ಪಾಸಾಗುತ್ತಾರೆಯೇ ಅವರು?”
“ಮಕ್ಕಳಿಗೆ ಪರೀಕ್ಷೆಯ ಭಯ ಇರಬಾರದು. ಅವರನ್ನು ನಪಾಸೂ ಮಾಡಬಾರದು.”
“ಅವರ ಪ್ರಗತಿಯ ಬಗ್ಗೆ ಕಾಳಜಿ ವಹಿಸುವುದಿಲ್ಲವೆ ನೀವು?”
“ಹೆಡ್‌ಮಾಸ್ಟರ್‍ ಆ ಕಾಗದ ಈ ಕಾಗದ ಎಂದು ಆಫೀಸಿಗೆ ಅಲೆದಾಡುವರು. ನಮ್ಮಲ್ಲಿ ಕೆಲವರು ತರಬೇತಿಗೆ ಹೋಗುವರು. ಕೆಲವರಿಗೆ ಗಣತಿ ಕಾರ್ಯ ಅದು-ಇದು ಎಂದಿರುವುದು ಮಕ್ಕಳಿಗೆ ಕಲಿಸಲು ಪುರುಸೊತ್ತೇ ಸಿಗುವುದಿಲ್ಲ”
“ಸಾಹೇಬರು ನಿಮ್ಮ ಶಾಲೆಯ ತಪಾಸಣೆಗೆ ಬರುವುದಿಲ್ಲವೆ?”
“ಹಿರಿಯ ಸಾಹೇಬರು ವರ್ಷಕ್ಕೊಮ್ಮೆ ಬರುತ್ತಾರೆ, ಕಿರಿಯ ಸಾಹೇಬರು ಬೇಕೆನಿಸಿದಾಗ ದಿಢೀರನೆ ಪ್ರತ್ಯಕ್ಷರಾಗುತ್ತಾರೆ.”
“ಅವರಿಗೆ ಸಮಸ್ಯೆ ಅರ್ಥವಾಗುವುದಿಲ್ಲವೆ?”
“ತಮ್ಮ ವೈಯಕ್ತಿಕ ಬೇಡಿಕೆಗಳನ್ನು ಪೂರೈಸಿಕೊಂಡು ಹೋಗುವ ಅವರು ಕಲಿಸುವುದರ ಬಗ್ಗೆ ಚಕಾರವೆತ್ತುವುದಿಲ್ಲ. ವಿಜಿಟ್ ಪುಸ್ತಕದಲ್ಲಿ ಎಲ್ಲವೂ ಉತ್ತಮವಾಗಿರುತ್ತದೆ. ನಮ್ಮ ಶಾಲೆ ಬಹಳ ನೆಮ್ಮದಿಯಾಗಿದೆ.”
“ಊರಿನವರು ಲಕ್ಷ್ಯ ಕೊಡುವುದಿಲ್ಲವೆ?”
“ನಮ್ಮದು ಸರಕಾರಿ ಶಾಲೆ, ಅದರ ಮೇಲೆ ಅವರ ಹಕ್ಕು ಇಲ್ಲ.”
“ಇದೆಲ್ಲ ವಿಚಿತ್ರವಲ್ಲವೇ?”
“ಅದೆಲ್ಲ ಕವರಿನ ಮಹಿಮೆ!”
“ಕವರು … ಏನದು?”
“ಸಾಹೇಬರಿಗೆ ನಾವು ಕವರು ಮುಟ್ಟಿಸುತ್ತೇವೆ.”
“ಏಕೆ?”
“ಕವರಿನಲ್ಲಿ ನಮ್ಮ ದುಡ್ಡಿರುವುದು.”
“ಸಾಹೇಬರಿಗೆ ಹಣ ಏಕೆ? ಅವರಿಗೆ ಪಗಾರ ಇರುವುದಿಲ್ಲವೆ?”
“ಪಗಾರ ಅವರ ಸಂಸಾರಕ್ಕೆ ನಮ್ಮ ದುಡ್ಡು ಅವರ ಇತರೆ ಖರ್ಚಿಗೆ.”
‘ಇದೆಂಥ ವ್ಯವಸ್ಥೆ?”
“ನಮ್ಮ ದೋಷಗಳನ್ನು ಸಾಹೇಬರು ಮುಚ್ಚಿಕೊಳ್ಳುತ್ತಾರೆ. ಸಾಹೇಬರ ದೋಷಗಳನ್ನು ದೊಡ್ಡ ಸಾಹೇಬರು. ಅವರ ಮೇಲಿನವರ ದೋಷಗಳನ್ನು ಅದಕ್ಕೂ ಮೇಲಿನವರು ಬೇರಿನಿಂದ ಟೊಂಗೆಯ ತುದಿತನಕ ಇದೇ ವ್ಯವಸ್ಥೆ ಇರುವುದು.”
“ಶಾಲೆ ಮತ್ತು ಮಕ್ಕಳ ಗತಿ?”
“ದೇವರಿಗೇ ಬಿಟ್ಟದ್ದು!”

 

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...