Home / ಕಥೆ / ಕಿರು ಕಥೆ / ನಾನು ನಿನ್ನನ್ನು ಪ್ರೀತಿಸುತ್ತೇನೆ

ನಾನು ನಿನ್ನನ್ನು ಪ್ರೀತಿಸುತ್ತೇನೆ

ಮೊದಲ ಬಾರಿಗೆ ಕಲೇಜಿನಲ್ಲಿ ಕಾಣಿಸಿಕೊಂಡ ಅವಳ ಕಣ್ಣುಗಳ ಬೆಡಗಿಗೆ ಎಲ್ಲ ಹುಡುಗರು ಮಾರುಹೋದರು. ಸದಾ ಹಸನ್ಮುಖಿ, ಹಿತಮಿತ ಮಾತಿನ ಆ ಹುಡುಗಿ ಸ್ವಲ್ಪ ದಿನಗಳಲ್ಲೆ ಚಿರಪರಿಚಿತಳಾದಳು. ರೂಪ, ಬುದ್ಧವಂತಿಕೆ, ಅಂತಸ್ತಿನ ದೃಷ್ಟಿಯಲ್ಲಿ ಮೇಲುಸ್ತರದಲ್ಲಿದ್ದ ಆಕೆಗೆ ಅಹಂ ಎಳ್ಳಷ್ಟು ಇರದಿರುವುದು ಅಚ್ಚರಿಯ ಸಂಗತಿಯಾಗಿತ್ತು. ಹುಡುಗಿಯರಿಗಂತೂ ಸರಿ, ಹುಡುಗರೆದುರಾದರೂ ಅವಳು ಯಾವ ಸಂಕೋಚವಿಲ್ಲದೆ ಮಾತನಾಡಿಸುವಳು. ಯಾವಾಗಲೂ ತರಗತಿಯ ಕಡೆಗೆ ಆಲಕ್ಷಿಸಿ ಲೇಡೀಸ್ ರೂಮಿನೆದುರು ಅಣಕು, ತಮಾಷೆ, ಪೊಗರಿನ ಮಾತುಗಳಿಂದ ಸಿನಿಮಾ ಹಿರೋಗಳ ಸ್ಟೈಲ್‌ನಲ್ಲಿ ಕಣ್ಣುಗಳಿಂದಲೇ ಹುಡುಗಿಯರ ಬೇಟೆಯಾಡುತ್ತಿದ್ದ ಹುಡುಗರು ಅವಳ ದೆಸೆಯಿಂದಾಗಿ ತರಗತಿಗಳಿಗೆ ಚಕ್ಕರೆ ಹೊಡೆಯುವುದನ್ನು ನಿಲ್ಲಿಸಿದ್ದರು. ಒಂದೊಂದು ಸಲ ಅವಳ ಸಲಿಗೆಯ ಮಾತುಗಳಿಂದ ಹುಡುಗರೆ ಮುಜುಗರಕ್ಕೊಳಪಡುವ ಪರಿಸ್ಥಿತಿ ನಿರ್ಮಾಣವಾಯಿತು.

ಚೆಲ್ಲು ಚೆಲ್ಲಾಗಿದ್ದ ಹುಡುಗಿ ಸಹಜವಾಗಿಯೇ ಆ ಶ್ರೀಮಂತ ಹುಡುಗನೊಂದಿಗೆ ಮಾತಾಡಿದ್ದಳು. ಸ್ಫುರದ್ರೂಪಿಯಾಗಿದ್ದ ಅವನು ಹಿಂಡುಗಟ್ಟಲೆ ಗೆಳೆಯರನ್ನು ಬೆನ್ನಿಗೆ ಕಟ್ಟಿಕೊಂಡು ಉಡಾಫೆಯಿಂದಲೇ ವತಿðಸುತ್ತಿದ್ದ. ಕ್ಲಾಸಿನಲ್ಲೂ ಅದೇ ಚಾಳಿ, ಅವನಿಂದ ಪ್ರಧ್ಯಾಪಕರಿಗೂ ತಲೆನೋವು. ಅವನ ಕೀಟಲೆ, ಪೊಗರಿನ ವರ್ತನೆ, ಲೇವಡಿ ಮಾತುಗಳಿಂದ ಹುಡುಗಿಯರು ಕಪ್ಪೆಚಿಪ್ಪಿನೊಳಗೆ ಮುದುಡಿಕೊಂಡಂತಿರುತ್ತಿದ್ದರು.

ಇಡೀ ಕ್ಯಾಂಪಸ್ಸು ಅವನನ್ನು ಸಹಿಸಿಕೊಂಡಿತ್ತು.

ಆ ಹುಡುಗಿಯ ಬಗ್ಗೆ ಅವನಿಗೆ ಮೊದಲ ನೋಟದಲ್ಲೆ ಪ್ರೀತಿ ಹುಟ್ಟಿಕೊಂಡಿತ್ತು. ಆದರೆ ಅದನ್ನು ಅವಳೆದುರು ಪ್ರಸ್ತಾಪಿಸುವ ಧಾರ್ಷ್ಟ್ಯವನ್ನು ತೋರಿಸಲಿಲ್ಲ. ಗೆಳೆಯರೊಂದಿಗೆ ಹೇಳಿಕೊಂಡಿದ್ದ. ಅವರು ಅವಳ ಮೇಲಿನ ಅವನ ಹುಚ್ಚಿನ ಕಿಚ್ಚಿಗೆ ಗಾಳಿಯೂದಿದ್ದರು. ಅವನು ಚಿತ್ತಾರದ ಕನಸುಗಳಲ್ಲಿ ಮೀಯುತ್ತ ಪೂರ್ತಿ ಅವಳ ಹಂಬಲದಲ್ಲಿ ಚಡಪಡಿಸುತ್ತಿದ್ದ. ಆಸೆ ಉಕ್ಕೇರುತ್ತಿದ್ದಂತೆ “ನಾನು ನಿನ್ನನ್ನು ಪ್ರೀತಿಸುತ್ತೇನೆ” ಎಂದು ಒಂದು ಸಾಲಿನ ಒಕ್ಕಣಿಕೆಯ ಕಾಗದವನ್ನು ಅವಳಿಗೆ ತಲುಪಿಸಿದ.

ಆ ಹುಡುಗಿ ಮಾತ್ರ ಸಹಜವಾಗಿದ್ದಳು.

ಅವನು ಆಕಾಶಕ್ಕೆ ನೆಗೆದಿದ್ದ. ಅಂತ ಚೆಂದದ ಚೆಲುವೆಯನ್ನು ದಕ್ಕಿಸಿಕೊಂಡ ಸಂಭ್ರಮದಲ್ಲಿ ಗೆಳೆಯರು ಅವನಿಂದ ಜಬರದಸ್ತಾದ ಪಾರ್ಟಿ ಮಾಡಿಸಿದ್ದರು. ಅವರಿಬ್ಬರ ಪ್ರಣಯದ ವಿಷಯವನ್ನು ಅವರೇ ಹರಡಿ ವರ್ಣರಂಜಿತಗೊಳಿಸಿದ್ದರು. ಹುಡುಗನಿಗೆ ದಿನದ ಇಪ್ಪತ್ನಾಲ್ಕು ಗಂಟೆ ಅವಳದೇ ಧ್ಯಾನವಾಯಿತು.

ಪ್ರೀತಿಯೆಂದರೆ ಏನು? ಹೆಣ್ಣು-ಗಂಡು ತೀರ ಹತ್ತಿರ ಹತ್ತಿರ ಬರಬೇಕು. ಮನಸ್ಸು ಮನಸ್ಸು ಕೂಡಬೇಕು. ಭಾವನೆಗಳು ಎರಕಗೊಳ್ಳಬೇಕು. ಹೃದಯಗಳು ಮಾತಾಡಬೇಕು. ಜೊತೆ ಜೊತೆಯಾಗಿ ಹೋಟ್ಲು ಸಿನಿಮಾ, ಪಿಕ್‌ನಿಕ್ಕು ಪಾರ್ಕು ಒತ್ತಾಯಿಸಿದರೂ ಅವಳು ಹೊಟೇಲಿಗೆ ಬರಲಿಲ್ಲ. ಏಕಾಂತದಲ್ಲಿ ಮಾತಾಡಬೇಕೆಂದರೆ ಪಾರ್ಕಿಗೂ ಬರಲಿಲ್ಲ. ಎದುರಾದರೆ ಮಾತಾಡುವಳು. ನಗುವಳು, ಬರೆದುಕೊಳ್ಳಲು ನೋಟ್ಸ್ ಕೊಡುವಳು. ಪ್ರೀತಿಯ ವಿಷಯ ಮಾತಾಡಬೇಕೆನ್ನುವಷ್ಟರಲ್ಲಿ ಮಾಯೆಯಾಗಿ ಬಿಡುವಳು. ಅಂತರಂಗದ ವಿಚಾರವಾದರೂ ಏನು!

ಒಂದಿನ ಅವನು ಅವಳನ್ನು ಹಿಡಿದು ನಿಲ್ಲಿಸಿಯೇ ಬಿಟ್ಟ. ಎದೆ ಒಡೆದು ಕೊಳ್ಳುತ್ತಿದ್ದರೂ, ಮೈ ಬೆವರುತ್ತಿದ್ದರೂ ಧೈರ್ಯದಿಂದ “ಐ ಲವ್ ಯು” ಎಂದುಬಿಟ್ಟ. ಆಕೆ ಪಕಪಕನೆ ನಕ್ಕು ಬಿಟ್ಟಳು. “ಪ್ಲೀಸ್ ನೀವು ನಗಬೇಡಿ, ನಿಮ್ಮ ಅಭಿಪ್ರಾಯ ಹೇಳಿರಿ” ಗೋಗರೆದ ಅವನು.

“ನಾನೇಕೆ ಹೇಳಬೇಕು?”
“ನಾನು ನಿಮ್ಮನ್ನು ಪ್ರೀತಿಸುತ್ತೇನೆ.”
“ಪ್ರೀತಿಸು ಅಂತ ಯಾರು ಹೇಳಿದರು?”

ವಿಚಲಿತನಾದರೂ ಹುಡುಗ ಸಾವರಿಸಿಕೊಂಡ: “ಹೇಳಿಕೆಯಿಂದ ಪ್ರೀತಿ ಹುಟ್ಟುವುದಿಲ್ಲ. ಅದು ಹೃದಯದ ಸೆಲೆ, ನಾನು ಮನಸಾರೆ ಪ್ರೀತಿಸುತ್ತೇನೆ ಮದುವೆ ಮಾಡಿಕೊಳ್ಳುತ್ತೇನೆ” ಎಂದ.

“ಅಂದರೆ ನನ್ನ ಜೀವನವನ್ನು ಹಾಳು ಮಾಡುವ ವಿಚಾರವೋ?” ಅವನ ಮೇಲಿನ ದೃಷ್ಟಿ ಹೊರಳಿಸದೆ ಕೇಳಿದಳು ಹುಡುಗಿ.

“ನೀವು ನನ್ನನ್ನು ಪ್ರೀತಿಸುವುದಿಲ್ಲವೆ?” ಗಲಿಬಿಲಿಗೊಳಗಾದ ಹುಡುಗ.

“ಹುಡುಗಿ ಸ್ಪಷ್ಟವಾಗಿ ಹೇಳಿದಳು” “ರೀ ಮಿಸ್ಟರ್‍, ನಾನು ಕಾಲೇಜಿಗೆ ಬಂದದ್ದು ಕಲಿಯಲಿಕ್ಕೆ, ಭವಿಷ್ಯ ರೂಪಿಸಿಕೊಳ್ಳುವುದಕ್ಕೆ – ಪ್ರೀತಿ, ಪ್ರೇಮದ ಹುಡುಗಾಟಕ್ಕಲ್ಲ.”

ಹುಡುಗನ ಮುಖದಲ್ಲಿ ಭ್ರಮೆಗಳ ಗುರುತು ಒಂದೂ ಕಾಣಿಸಲಿಲ್ಲ.

*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...