Home / ಕವನ / ಕವಿತೆ / ಆಗಮನ

ಆಗಮನ

ವಾಯುಸಂಚಾರಿ ಒಂದು ಪಟ್ಟಣದಿಂದ ಇನ್ನೊಂದಕ್ಕೆ ಹಾರಿ
ಬರುತ್ತಿದ್ದಾನೆ, ಕೆಳಗೆ ಮೋಡಗಳ ಮೇಲೆ ಮೋಡಗಳು ಬಿದ್ದು
ಅವುಗಳಂಚಿನಲಿ ಸೂರ್ಯನ ರಶ್ಮಿಗಳೆದ್ದು
ನಿಮಿಷಗಳು ಸರಿದರೂ ಸರಿಯುವುದಿಲ್ಲ ದಾರಿ

ಹೊಸೆಯುತ್ತಾನೆ ಮನಸ್ಸಿನಲ್ಲಿ ಒಂದು ಕವಿತೆಯ ಚರಣ:
ಎಲೆಲೆ ಗಗನ ಸಖಿ ಚಂದ್ರಮುಖಿ ಬಾರೆ
ಕಳಚಿ ಈ ಸೂಟುಬೂಟು ಆ ಅನಗತ್ಯದ ಸೀರೆ
ಮೋಡಗಳ ಮೆತ್ತೆಯೊಳಕ್ಕೆ ಹಾರೋಣ!

ಫಾರೂಕಬ್ದುಲ್ಲನ ಪತನ ವಿರೋಧಪಕ್ಷಗಳ ಪ್ರಕ್ಷೋಭನ
ಆಂತುಲೆಯ ವಿಚಾರಣೆ ಮುಂಬರುವ ಲೋಕಸಭಾ ಚುನಾವಣೆ
ಶೇರುಗಳ ಏರಿಳಿತ ಡಾಲರಿನ ಅನಿರೀಕ್ಷಿತ ಕುಸಿತ
ಶಬನಾ ಆಜ್ಮಿ ಸ್ಮಿತಾಪಾಟೀಲರ ಒಳಜಗಳ

ಆಹ! ಎಂತಹ- ಪೃಷ್ಠ!
ತಬ್ಬಿಕೊಳ್ಳಲೆಂದೇ ಉಬ್ಬಿನಿಂತ ಮಾಟ
ಕೇವಲ ಒಂದು ಒಳಚಡ್ಡಿಯ ಜಾಹೀರು
ಇರಲಿರಲಿ! ಈ ವಾರದ ಭವಿಷ್ಯ
ಏನು ವಿಷಯ?

“ಇಳಿಯಲಿದ್ದೇವೆ ನಾವೀಗ!
ದಯವಿಟ್ಟು ನಿಮ್ಮ ನಿಮ್ಮ
ಸೀಟು ಬೆಲ್ಟುಗಳನ್ನು ಕಟ್ಟಿಕೊಳ್ಳಿರಿ!
ಹೊಗೆಬತ್ತಿ ಸೇದದಿರಿ ! ಕೃತಜ್ಞತೆಗಳು !”
ಎನ್ನುತ್ತಾಳವಳು.

ಹೊರಗೆ ನೋಡುತ್ತಾನೆ-ಮೋಡಗಳಿಲ್ಲ
(ಶುಭ್ರ ವಾತಾವರಣ, ಸುಖಾಗಮನ)
ಎಷ್ಟೋ ದೂರ ಕೆಳಗೆ
ನೆಲ ಬಿದ್ದಿದೆ ಚಾಪೆಯ ಹಾಗೆ
ಮನೆ ಮರ ಕಾರ್ಖಾನೆ
ಮರೆತುಬಿಟ್ಪ ಆಟಿಕೆಗಳಂತೆ
ಮೊಡವೆಗಳಂಥ ಬಂಡೆಗಳು
ಇರುವೆಗಳಂತೆ ಸರಿಯುವ ಮನುಷ್ಯರು
ಇಷ್ಟೆತ್ತರದಿಂದಲೇ ಹೀಗೆ ಕಾಣಿಸಿದರೆ
ಇನ್ನೊಂದು ಗ್ರಹದಿಂದ ಹೇಗೆ ಕಾಣಿಸಬೇಡ!
ಎಂದುಕೊಳ್ಳುತ್ತಾನೆ-ಸೆಜಿಟೇರಿಯಸ್
ಧನುರ್ಧಾರಿ ಎಷ್ಟೋ ಬೇಟೆಗಳ ಹೊಡೆದವನು
ಸೀಟಿನೊಳಕ್ಕೆ ಜಾರಿ

ಎಂಥ ಸೆಕೆ ನೆಲದ ಮೇಲೆ
ನೂಕು ನುಗ್ಗಲು ಬೇರೆ!
ಯಾರ ಹೆಂಡಿರು ಯಾರ ಮಕ್ಕಳು
ಯಾರು ಯಾರಿಗೆ ಹಿಡಿದು ನಿಂತ ಹಾರಗಳು?
ಬಾಗಿಲಿನಿಂದಾಚೆ ಇರಿಸುತ್ತಾನೆ ಪಾದ
ಪರಿಚಯದ ಮುಖಗಳಿಗಾಗಿ ಹುಡುಕುತ್ತಾನೆ
ಇವನಲ್ಲ! ಇವನಲ್ಲ! ಎನ್ನುತ್ತವೆ
ಪ್ರತಿಯೊಂದು ಜತೆ ಕಣ್ಣುಗಳು
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...