Home / ಕವನ / ಕವಿತೆ / ಭಾಗ್ಯನಗರ

ಭಾಗ್ಯನಗರ

ಈ ಚೌಕಾಂಬದಲಿ ನಿಂತು ಕೇಳುವೆನು ನಾನು
ಭಾಗ್ಯ ನಗರವೇ ನಿನ್ನೆ ಭಾಗ್ಯದ ಬಾಗಿಲೆಲ್ಲಿ?
ಇಷ್ಟೆತ್ತರದಿಂದ ಕಾಣಿಸುವುದೇನು-ಜನರು
ಇರುವೆಗಳಂತೆ, ಟ್ರಕ್ಕುಗಳು, ಬಸ್ಸುಗಳು
ಎತ್ತಿನಗಾಡಿಗಳು, ತಲೆಹೊರೆಯ ಮೂಟೆಗಳು
ಯಾರೋ ಆಡುತ್ತಿರುವ ಆಟಿಕೆಗಳಂತೆ
ಮನುಷ್ಯರ ಮಾತುಗಳು ಗೊಂದಲದಂತೆ

ಗಾರೆಯಲಿ ಬರೆದ ಈ ಹೆಸರುಗಳು
ಯಾರವೆಂದು ಹೇಳುವುದು ಹೇಗೆ ?
ಚರಿತ್ರೆಯಲ್ಲಿ ಬರೆದಂತೆ ಬರೆದಿದ್ದಾರೆ ಇಲ್ಲಿ
ಹೆಣ್ಣುಗಂಡುಗಳು ಪ್ರವಾಸಿಗಳು ಪ್ರಣಯಿಗಳು
ಈ ಸುತ್ತು ಮೆಟ್ಟಲುಗಳನೊಂದೊಂದೆ
ಏರಿ ಬಂದವರು ಕಿಂಡಿಗಳ ಬಳಿ ನಿಂತು
ಮೂಸಿ-ಗೊಲ್ಕೊಂಡ-ಫಲಕ್‌ನುಮಾದ
ಮೇಲಿಂದ ಬೀಸಿ ಬರುವ ಗಾಳಿಗೆ ತೆರೆದು
ಮಾಯಾ ಪಕ್ಷಿಗಳಂತೆ ಮಾಯವಾದವರು
ಏನ ಬಿಟ್ಟರು ಏನ ಕೊಂಡೊಯ್ದರು

ಮಾರ್ಗಗಳು ಹೊರಟು ಊರುಗಳ ಸೇರಿದುವು
ಮಿನಾರಗಳ ನೆರಳು ಬಿದ್ದು ಬೆಳೆದುವು
ಅವು ಕೋಟೆಕೊತ್ತಲಗಳ ರೂಪು ತಳೆದುವು
ಅದೊ ಬುರುಜು! ಅದೊ ಸೇನೆ! ಅದೊ
ತೋಫಖಾನೆ! ಅದೋ ಅಂತಃಪುರದಿ೦ದ
ಹೊರಟ ಮೇನೆ! ಜಾಗಟೆಯ ಧ್ವನಿಯೊ
ನಮಾಜಿನ ಕರೆಯೊ ಕಾಳಗದ ಕಹಳೆಯೊ
ಕಂಡರೂ ಕಾಣಿಸದು ಕೇಳಿದರೂ ಕೇಳಿಸದು
ಸಂಜೆಯ ಮಬ್ಬಿನಲಿ ನನ್ನ ಜತೆ ಯಾರಿಲ್ಲ
ನನ್ನ ಹೊರತು ಯಾರೂ ಇರದಲ್ಲಿ? ಆಹ್!

ಯಾರ ಭಾಗದ ಭಾಗ್ಯ! ಭಾಗ್ಯಮತಿಯೇ
ಇನ್ನೂ ಇಲ್ಲೇಕೆ ಕುಳಿತಿರುವೆ ನೀನು?
ನಾಟ್ಯ ಮುಗಿಯಿತು, ದರಬಾರು ಮುಗಿಯಿತು
ಸುಲ್ತಾನನೂ ಹೊರಟು ಹೋದನು ಅರಮನೆಗೆ
ನಗರದ ದೀಪಗಳು ಒಂದೊಂದೆ ಆರಿಹೋಗಿವೆ
ಕತ್ತಲು ಬಂದು ಮಿನಾರಗಳನ್ನು ಮುತ್ತಿವೆ
ತಿಂಗಳಿನ್ನೂ ಮೂಡಿರದ ಹೊತ್ತು ಹೊಳೆಯುವುದು
ಮಾತ್ರ ನನ್ನ ಮೂಗಿನ ನತ್ತು ಬೆಳ್ಳಿ ನಕ್ಷತ್ರ –
ದಂತೆ ನರ್ತಿಸಿ ಆಯಾಸಗೊಂಡವಳೆ ನನ್ನ
ಕಲ್ಪನೆಯಲ್ಲಿ ಬಂದು ಇಡಿಯಾಗಿ ನಿಲ್ಲು
ನಿನ್ನ ಪ್ರೀತಿಯ ಬೆಳಕ ಚೆಲ್ಲು
ನಿನ್ನ ಹೆಸರನೆ ಹೊತ್ತ ನಗರದ ಮೇಲೆ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...