Home / ಕವನ / ಕವಿತೆ / ಕವಿಯ ಹುಚ್ಚು ಮನಸ್ಸು

ಕವಿಯ ಹುಚ್ಚು ಮನಸ್ಸು

ಕವಿಯ ಹುಚ್ಚು ಮನಸ್ಸು
ಕುಳಿತಲ್ಲಿ ಕೂರುವುದಿಲ್ಲ
ಒಂದು ವಸ್ತುವಿನಿಂದ
ಇನ್ನೊಂದು ವಸ್ತುವಿಗೆ
ನೆಗೆಯುತ್ತಲೇ ಇರುತ್ತದೆ

ಅದು ಉದಾತ್ತವಾಗಲು ಬಯಸುತ್ತಲೇ
ಸಣ್ಣತನವನ್ನೂ ತೋರಿಸುತ್ತದೆ
ತಥಾಗತನ ಧ್ಯಾನದಲ್ಲಿ ಕೂಡ
ಯೋನಿ ಶಿಶ್ನಗಳ ಕುರಿತು
ಯೋಚಿಸುತ್ತದೆ

ಶಬ್ದ ನಿಶ್ಯಬ್ದಗಳ
ಶ್ವಾಸ ನಿಶ್ವಾಸಗಳ
ಬೆನ್ನು ಹತ್ತುತ್ತದೆ
ತೆರೆದ ಕಿಟಕಿಗಳ
ಒಳಗೆ ಹಣಿಕುತ್ತದೆ

ಕಾಣುವ ಸಂಗತಿಗಳನ್ನು
ಕಡೆಗಣಿಸುತ್ತದೆ
ಕಾಣದ ಸಂಗತಿಗಳನ್ನು
ಕಂಡಿದ್ದೇನೆಂದು
ಭ್ರಮಿಸುತ್ತದೆ

ಸರಿ ಸರಿ ಯೋಚಿಸುದದನೆಲ್ಲ
ಬರೆಯಬೇಕಾಗಿಲ್ಲ
ಎಲ್ಲ ಮುಚ್ಚು ಮರೆಗಳನೂ
ತೆರೆದು ಮುಖಕ್ಕೆ
ಹಿಡಿಯಬೇಕಾಗಿಲ್ಲ

ತೋರಿಸು ಆಕಾಶ, ಸಮುದ್ರ.
ಹಿಮಾಲಯ, ಅಚ್ಛೋದ ಸರೋವರ
ನಾಗಾರ್ಜುನ ಸಾಗರ ಅಣೆಕಟ್ಟು
ಕನಾಟ್ ಸರ್ಕಲು
ಶೆರಾಟನ್ ಹೋಟೆಲು

ಒಂದೊಂದು ವಿಚಾರಗಳನ್ನೂ
ಚಿನ್ನದ ನೀರಲ್ಲಿ ಅದ್ದಿ ತೆಗೆ-ಆಗ ಅವು
ಥಳಥಳಿಸುವುವು-ಅವರವರ
ಪ್ರಿಯತಮೆಯರ ಕೊರಳ
ಆಭರಣಗಳಂತೆ

ಜನರು ಆದರಿಸುವರು ಮಹಾ
ದಾರ್ಶನಿಕನೆಂದು ಹೊಗಳುವರು
ಎಲ್ಲರೂ ಕರೆಯುವರು
ಯಾರೂ ತಮ್ಮ ಹೆಂಡಂದಿರನ್ನು
ನಿನ್ನ ಜತೆ ಬಿಡಲು ಹೆದರರು
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್