Home / ಲೇಖನ / ಸಾಹಿತ್ಯ / ಲವ್ವಲ್ ಹಿಂಗೇನೆ

ಲವ್ವಲ್ ಹಿಂಗೇನೆ

ಭಾವಯಾನ
ಪ್ರೀತಿಯ ಮಾತು…
ಲವ್ವಲ್ ಹಿಂಗೇನೆ
ಪ್ರೇಮವೆಂದರೆ ಹೇಳಲು ಬಯಸಿ, ಹೇಳಲು ಆಗದ ಮಧುರ ಭಾವನೆ… ಮಧುರ ಯೋಚನೆ… ಅರ್ಪಣೆ… ಸಮರ್ಪಣೆಯ ಸೂಚನೆ. L..o..v..e.. ಎಂಬುದು A to Z ಕನಸುಗಳ ಸಾಗರವೇ ಆಗಿದೆ.
ನನಗೆ ಬರುತ್ತಿರುವ ಓದುಗರ ಹಾಗೂ ಸ್ನೇಹಿತರ ದೂರವಾಣಿ ಕರೆಗಳಲ್ಲಿ ಕೇಳುವ ಪ್ರಶ್ನೇ ಒಂದೇ…! “ನೀವ್ ಯಾಕೆ ಪ್ರೀತಿ ಬಗ್ಗೆನೇ ಬರೀತೀರಾ ? ಬೇರೆನೂ ಗೊತ್ತಿಲ್ವ…” ಎಂದು. ಅದಕ್ಕೆ ನನ್ನಿಂದ ಬಂದ ಉತ್ತರ “ಪ್ರೀತಿ ನಿರಂತರ – Love is eternal”. ಪ್ರತಿ ದಿನ, ಪ್ರತಿ ಕ್ಷಣ ಪ್ರೀತಿನ ಬಿಟ್ಟು ಈ ಬದುಕಿಲ್ಲಾ. ಈ ಪ್ರಪಂಚದ ಸೃಷ್ಟಿಯ ಉಸಿರಾಟನೇ ಪ್ರೀತಿ. ಮೊಗ್ಗು ಹೂವಾಗೋದು – ಹೂ ಕಂಪನ್ನು ಸೂಸುವುದು – ಹೂ ದುಂಬಿಯ ಸೆಳೆಯುವುದು – ಹಸು ಕರುವಿಗೆ ಹಾಲುಣಿಸುವುದು – ಚಿಗುರು – ಇಬ್ಬನಿ – ಹಸಿರು – ಗಾಳಿ ಎಲ್ಲವೂ ಪ್ರೀತಿನಾ ಅವಲಂಬಿಸಿ ಬದುಕುತ್ತಿರುವುದು. ಇವೆಲ್ಲದರ ಉಸಿರಾಟನೇ ಪ್ರೀತಿ… So, Love is one of the part of our life.
| ಯುಗ ಯುಗಗಳು ಕಳೆದರೂ |
| ಹಲವು ಜನುಮ ಕಳೆದರೂ
| ಓದಿ ಮುಗಿಸದ ಗ್ರಂಥ ಪ್ರೇಮ |
| ಹಾಡಿ ಮುಗಿಸದ ಗೀತೆ ಪ್ರೇಮ |
| ಎಂದೂ ಮುಗಿಯದ ಪಯಣ ಒಂದು ಗೂಡುವ ತಾಣ ಪ್ರೀತಿ ||
ಹದಿನಾರು ವರ್ಷ ಕಾದುನಿಂತು, ಹದಿನೇಳಕ್ಕೆ ಹೇಳಿ ಬಿಡಬೇಕು ಎಂದುಕೊಳ್ಳುವ ಈ ಪ್ರೀತಿ – ಅದನ್ನು ಎಂದಿಗೂ ಹೇಳಲು ಆಗದೇ, ಅದು ಎಲ್ಲಿ ಹುಟ್ಟಿತೋ- ಅಲ್ಲೇ ಆ ಪ್ರೀತಿ ಕೊರಗಿ ಸಾಯುವ ಸ್ಥಿತಿಯನ್ನು, ನಾನು ಕೆಲವರಲ್ಲಿ ನೋಡಿದ್ದೇನೆ. ಆಗ ಒಳಗೊಳಗೆ ಅಳುವುದು ಆ ಪಾಪಿ ಹೃದಯ..! ಇನ್ನೂ ಕೆಲವು ವ್ಯಕ್ತಿಗಳು ಏನಾದರೂ ಸಾಹಸ ಮಾಡಿ ಇಷ್ಟ ಪಟ್ಟ ಪ್ರೀತಿಯನ್ನು ಪಡೆದುಕೊಳ್ಳಲು ಹೋಗಿ ಯಾವುದಾದರು ಎಡವಟ್ಟುಮಾಡಿಕೊಂಡು ಎಲ್ಲರ ಕಣ್ಣಲ್ಲು ನೀರು ಹಾಕಿಸಿ ಬಿಡುತ್ತಾರೆ. ಪ್ರೀತಿ ಎನ್ನುವ ಈ ಎರಡು ಅಕ್ಷರ ಕೇಳೋಕೆ ಮುದ್ದಾಗಿದ್ದರೂ, ಮುಗ್ಧ ಮನಸ್ಸುಗಳನ್ನು ತನ್ನಿಷ್ಟದಂತೆ ಆಳಿ, ಅಳುವವರೆಗೂ ಬಿಡುವುದಿಲ್ಲ. ನಂತರ ಇದಕ್ಕೆಲ್ಲಾ ಕಾರಣಕೊಟ್ಟು ದೂರುವುದು ವಿಧಿ ಹಣೆಬರಹವನ್ನಾ…
ಹ್ಞೂಂ ಜಗತ್ತೇ ಬೆರಗಾಗುವ ಹಾಗೆ.., ಈ ಕಾಲನೇ ತಿರುಗಿ ನೋಡುವ ಹಾಗೆ, ಇತಿಹಾಸ ಆಗಿ ಹೋಗಿರೊ ಪ್ರೇಮಿಗಳ ಕಥೆ, ಕಣ್ಣಲ್ಲಿ ನೀರೂರಿಸಿದ್ದರು – ಅದೆವು ಸತ್ಯ, ಇಂದಿಗೂ ಜೀವಂತವೇ ಈ ಪ್ರೀತಿನೇ ಹಾಗೆ, ಬೇಡ ಬೇಡ ಅಂತಾನೆ ಪ್ರೀತಿಯ ಅಮೃತ ಸವಿಯುತ್ತೀವಿ, ಆಮೇಲೆ ಬೇಕು ಅಂದರೂ ಬಾರದ ಸಾವನ್ನು ಬೈದುಕೊಂಡು ಸುಮ್ಮನಾಗುವ ಪರಿಯೇ ಹೀಗೆ
ಒಂಥರಾ ಹಿತಕರ ಮಿಡಿತ… ಯಾರು ತಡೆಯದ ತುಡಿತ… ಏನೇನೋ ಹುಡುಕುವ ತವಕ… ಮೈಮನಗಳ ಈ ಪುಳಕ, ಅನುಭವಕ್ಕೆ ಮಾತ್ರ ನಿಲುಕುವ ಕೋಮಲ ಕಲ್ಪನೆ. ಈ ಪ್ರೀತಿಲೀ ಮಾಡಿದ್ದೆಲ್ಲವೂ ಸರಿಯೇ ಅನಿಸುವಷ್ಟು ಭ್ರಮೆಯ ಲೋಕಕ್ಕೆ ನಮ್ಮನ್ನು ಕರೆದೊಯ್ದು, ಆ ಭ್ರಮೆಯ ದಾರಿಯಲ್ಲೇ ಕೊಂಚ ಸಾಗುತ್ತಿರುವಾಗ ಆ ದಾರಿಯು ಬಂದು ಸೇರುವ ತಾಣವೇ ವಾಸ್ತವದ ಪ್ರಪಂಚ.
ಮನಸ್ಸುಗಳ ಮಂಥನ ಮಿಲನದ ಚಿಂತನ ಹೃದಯದ ಸ್ಪಂದನ ಬಿಡಿಸದ ಬಂದನ ಈ ಪ್ರೇಮ. ಈ ಪ್ರೀತಿಯ ಬಗ್ಗೆ ಬರೆಯುವುದಕ್ಕೂ ಚಂದ… ಓದುವುದಕ್ಕೂ ಚಂದ… ಹಾಡುವುದಕ್ಕೂ ಚಂದ… ಒಬ್ಬರ ಹೆಸರನ್ನು ಮತ್ತೊಬ್ಬರ ಹೆಸರಿಗೆ ಸೇರಿಸಿ ಅಂಗೈಯಲ್ಲಿ ಬರೆಯೋದು ಚಂದ. ಇಲ್ಲಿ ಒಬ್ಬರನ್ನೊಬ್ಬರು ಕದ್ದು ನೋಡುವ ಪರಿಯಂತು ಅಂದವೋ ಆನಂದ. ಒಂದಿಷ್ಟು ಹುಸಿಮುನಿಸುಗಳು ಮತ್ತಷ್ಟು ಹೊಂಗನಸುಗಳು ಇವೆಲ್ಲವು ಪ್ರೀತಿಯ ಭಾವನೆಗಳ ಬಲೆಯ ಒಂದು ಸುಂದರ ಪ್ರಪಂಚ. ಆದರೆ ಆ ಭಾವನೆಯೆಂಬ ಬಲೆಯಿಂದ ಈಚೆಗೆ ಮತ್ತೆ ಬರುವುದು ಕಷ್ಟ ಸಾಧ್ಯ.
ವಯಸ್ಸು ಇದು ಹಾಗೇನೆ, ಇದರ ವರಸೆಗೆ ಪ್ರತಿಯೊಬ್ಬರೂ ಸೋಲುತ್ತಾರೆ. ಒಮ್ಮೆ ಪ್ರೇಮಿ ಪ್ರೀತಿಯಲ್ಲಿ ಬಿದ್ದರೆ ‘ಸಪ್ತಸಾಗರ ದಾಟು’ ಎಂದರೂ ದಾಟುತ್ತಾನೆ ಅಂತ ಕವಿಗಳೇ ನುಡಿದಿದ್ದಾರೆ. ಏನೇ ಆದರೂ ಮನಸ್ಸಲ್ಲಿ ಮೂಡಿದ ಭಾವನೆ ಮಾತಾಗಿ ತುಟಿ ಮೇಲೆ ಬಂದು ನಿಂತಾಗ, ನಾಲಿಗೆಯ ಸಪೋರ್ಟ್ ತಗೊಂಡು “ನೀನಂದ್ರೇ ನನಗೆ ಇಷ್ಟ” ಅಂತ ಹೇಳೋದು ಪ್ರೀತಿಯ ಒಂದು ರೀತಿ…
ಮೊದಲನೇ ಬಾರಿಗೆ ಒಂದು ಹುಡುಗಿ ಫೋನ್ ಮಾಡಿ ‘I Love You’ ಎಂದಾಗ ಆಗುವ ಭಯ..! ಆ ನಡುಕ..! ಒಂದು ವಾರವಾದರೂ ಸುಧಾರಿಸಿಕೊಳ್ಳುವುದು ಕಷ್ಟವೇ ಬಿಡಿ. ನಂತರ ಅವರ ‘I Love You’ ಎಂದಿದಕ್ಕೆ ನಾವು ಉತ್ತರಿಸುವುದೋ… ಅಥವಾ ಬುದ್ಧಿ ಹೇಳುವುದೋ… ಅಥವಾ ಅವರ ಪ್ರೀತಿಯನ್ನು ಒಪ್ಪಿಕೊಳ್ಳುವುದೋ… ಅಪ್ಪಿಕೊಳ್ಳುವುದೋ ತಿಳಿಯದೇ ಫೋನ್ ಕಟ್ ಮಾಡುವ ಪರಿಯಂತೊ ಒಂಥರಾ ಬಲವಂತದ ಆತ್ಯಾಚಾರವೇ.
ಚೊಚ್ಚಲ ಪ್ರೇಮದ ಬೆಚ್ಚನೆಯ ಭಾವವು ಎದೆಗೆ ಇಡುವ ಕಚಗುಳಿಯೇ ಹೀಗೆ. ಒಂದ್ಸರಿ ನೋಡ್ಬೇಕು ಮತ್ತೆ ನೋಡ್ಬೇಕು ಮತ್ತೆ ಮತ್ತೆ ಪ್ರೇಯಸಿನ ಮಾತಾಡಿಸಬೇಕು ಅನ್ಸೋದೇ ಚೊಚ್ಚಲ ಪ್ರೇಮಿಯ ಬಯಕೆ. ಈ ಪ್ರೀತಿಯಲ್ಲಿ Jealousy , ನನ್ಗೆ ಬೇಕು ಅನ್ನೋ Possessiveness – ಎಲ್ಲಾನೂ ಇದೆ. ಎಲ್ಲವನ್ನೂ ಸೆಳೆಯುವುದು – ಎಲ್ಲರನ್ನೂ ಗೆಲ್ಲುವುದು ಈ ಪ್ರೀತಿಯ ಹಣೆಬರಹ. ಆದರೆ ಇಲ್ಲಿ ಪ್ರೀತಿಸೋ ಹೊರಟ ಪ್ರೇಮಿಗಳಲ್ಲಿ ಕೆಲವರು ಗೆಲ್ಲುತ್ತಾರೆ ಇನ್ನೂ ಕೆಲವರು ಯಾಮಾರುತ್ತಾರೆ.
ಇಲ್ಲಿ ಪ್ರೀತಿಸುವ ಪ್ರೇಮಿಗಳು ಅದೆಷ್ಟೋ ಜನ, ಕೆಲವರು ಪ್ರಮಾಣಿಕವಾಗಿ, ಕೆಲವರು ಕಾಟಾಚಾರಕ್ಕೆ, ಕೆಲವರು ಕಷ್ಟವಾದರೂ ಪ್ರೀತಿನಾ ಇಷ್ಟ ಪಟ್ಟು ಪಡೆದುಕೊಳ್ಳುತ್ತಾರೆ. ಆದರೆ ಇಲ್ಲಿ ಶೇ.೧೦೦ಕ್ಕೆ ೧೦ ಜನ ಯಶಸ್ಸು ಕಾಣುತ್ತಾರೆ, ಉಳಿದವರ ಪ್ರೇಮಕಥೆಗಳಿಗೆ ಯಾರ‍್ಯಾರೋ ಅಂತ್ಯ ಬರೆಯುತ್ತಾರೆ. ಈ ಜಗತ್ತಿನಲ್ಲಿ ಒಳ್ಳೆಯ ಶಕ್ತಿ ಇದ್ದಷ್ಟೇ ಕೆಟ್ಟ ಶಕ್ತಿಗಳೂ ಇವೆ. ಎಲ್ಲವನ್ನು ತಾಳ್ಮೆಯಿಂದ ನಿಭಾಯಿಸುವುದನ್ನು ಕಲಿತರೆ “ಒಲವೇ ಜೀವನ ಸಾಕ್ಷಾತ್ಕಾರ ” .
“If you miss one issue of my Bhavayaana
You will lose lots of feelings in your life Bhavayaana”
By Kavish Sringeri
– 9945342433

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...