Home / ಕವನ / ಕವಿತೆ / ಅಖಿಟೋಪ

ಅಖಿಟೋಪ

ಮೆಸಪೊಟೇಮಿಯಾದ ಒಬ್ಬ ರಾಜ
ಚರಿತ್ರೆಯಲ್ಲಿ ಶಾಶ್ವತವಾಗಿ ಉಳಿಯಬೇಕೆಂದು
ಕೆತ್ತಿಸಿದ ತನ್ನ ಹೆಸರನ್ನು
ಹೆಸರು ಅಖಿಟೋಪನೆಂದು
ಹೆಬ್ಬಂಡೆಗಳ ಮೇಲೆ
ಮೃತ್ತಿಕೆಗಳ ಮೇಲೆ
ಮರದ ಕಾಂಡಗಳ ಮೇಲೆ
ಬರೆಸಿದ ಪಠ್ಯ ಪುಸ್ತಕಗಳಲ್ಲಿ
ಸೇರಿಸಿದ ಧರ್ಮಗ್ರ೦ಥಗಳಲ್ಲಿ
ಪೂಜಾರಿಗಳ ಮಂತ್ರಗಳಲ್ಲಿ
ಎಲ್ಲೆಲ್ಲು ಅಖಿಟೋಪ ಅಖಿಟೋಪ
ಎಷ್ಟೆಂದರವನ ಕೋಪ
ಕುದುರೆಗಳು ಕೆನೆಯುವುದೂ
ಕಪ್ಪೆಗಳು ವಟಗುಟ್ಟುವುದೂ
ಆದವು ಅಖಿಟೋಪ
ಅಖಿಟೋಪನೆಂದರ ಅಂದಿನ ಭಾಷೆಯಲ್ಲಿ
ಅನೇಕ ಸೂರ್ಯರ ತಾಪ-
ವೆಂದು ಅರ್ಥ

ಆದರೆ ಮೊಂಗೋಲರೆಂಬವರು
ಮಹಾ ನಿರ್ದಯರು
ಅವರು ಮಾಂಸ ಬೇಯಿಸದೆ ತಿನ್ನುತ್ತಿದ್ದರು
ಕಳ್ಳಿನ ಭಾಂಡಿ ಕುಡಿಯುತ್ತಿದ್ದರು
ಕುಡಿದು ಢರ್ರನೆ ತೇಗುತಿದ್ದರು
ದೊಡ್ಡದಾಗಿ ನಗುತಿದ್ದರು
ಅವರು ಚೀನಾ ದೇಶದಿಂದ
ಸಿಡಿಮದ್ದನ್ನು ತಂದರು
ಕುದುರೆಗಳ ಮೇಲೆ ಬಂದರು

ಸಂತೆಗೆಂದು ಹೋದ ದೋಣಿಗಳು
ಸಂಜೆಯಾದರೂ ಮರಳಲಿಲ್ಲ
ನಗರದ ಬಾಗಿಲುಗಳು
ಹೊತ್ತಿಗೆ ಮೊದಲೇ ಮುಚ್ಚಿದುವು
ದೀಪಗಳೂ ಆರಿದುವು
ಯಾವಾಗಲೂ ಹಾಡುತಿದ್ದವರು
ಯಾಕೆ ಹಾಡಲಿಲ್ಲ?
ಮತ್ತೆ ಬೆಳಗಾಯಿತು?
ವರ್ಷಗಳು ಉರುಳಿದುವೆ?
ಯಾರಾದರೂ ಸುದ್ದಿಯನು ತಂದರೆ?
ಮೆಸಪೊಟೇಮಿಯಾ!
ಹರಿವ ನೀರಿನಲಿ
ಕೆತ್ತಿರುವುದೆ ಚರಿತ್ರೆ?
ಹೇಳೀಗ ನಮ್ಮ ಮೆಚ್ಚಿನ ಅಖಿಟೋಪನೆಲ್ಲಿ?
ಎಲ್ಲಿ ಆ ಮಂತ್ರಗಳು
ಹೆಸರು ಬರೆಸಿದ ಗ್ರಂಥಗಳು
ಎಲ್ಲಿ ಕುದುರೆಗಳು ಎಲ್ಲಿ ಕಪ್ಪೆಗಳು
ಎಲ್ಲಿ ಆ ಹೆಬ್ಬಂಡೆ
ಸಿಡಿದ ನದಿ ದಂಡೆ
ಅನೇಕ ಸೂರ್ಯರ ತಾಪ
ಅಖಿಟೋಪ
ಯಾವ ಸಮುದ್ರದಲಿ ಬಿದ್ದ
ಹೇಳು ಮೆಸಪೊಟೇಮಿಯಾ
ಅಂಥ ಪತನಕ್ಕೆ
ಇಂಥ ಸಾಲುಗಳು ಸಾಕೆ?
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...