Home / ಕವನ / ಕವಿತೆ / ಅಖಿಟೋಪ

ಅಖಿಟೋಪ

ಮೆಸಪೊಟೇಮಿಯಾದ ಒಬ್ಬ ರಾಜ
ಚರಿತ್ರೆಯಲ್ಲಿ ಶಾಶ್ವತವಾಗಿ ಉಳಿಯಬೇಕೆಂದು
ಕೆತ್ತಿಸಿದ ತನ್ನ ಹೆಸರನ್ನು
ಹೆಸರು ಅಖಿಟೋಪನೆಂದು
ಹೆಬ್ಬಂಡೆಗಳ ಮೇಲೆ
ಮೃತ್ತಿಕೆಗಳ ಮೇಲೆ
ಮರದ ಕಾಂಡಗಳ ಮೇಲೆ
ಬರೆಸಿದ ಪಠ್ಯ ಪುಸ್ತಕಗಳಲ್ಲಿ
ಸೇರಿಸಿದ ಧರ್ಮಗ್ರ೦ಥಗಳಲ್ಲಿ
ಪೂಜಾರಿಗಳ ಮಂತ್ರಗಳಲ್ಲಿ
ಎಲ್ಲೆಲ್ಲು ಅಖಿಟೋಪ ಅಖಿಟೋಪ
ಎಷ್ಟೆಂದರವನ ಕೋಪ
ಕುದುರೆಗಳು ಕೆನೆಯುವುದೂ
ಕಪ್ಪೆಗಳು ವಟಗುಟ್ಟುವುದೂ
ಆದವು ಅಖಿಟೋಪ
ಅಖಿಟೋಪನೆಂದರ ಅಂದಿನ ಭಾಷೆಯಲ್ಲಿ
ಅನೇಕ ಸೂರ್ಯರ ತಾಪ-
ವೆಂದು ಅರ್ಥ

ಆದರೆ ಮೊಂಗೋಲರೆಂಬವರು
ಮಹಾ ನಿರ್ದಯರು
ಅವರು ಮಾಂಸ ಬೇಯಿಸದೆ ತಿನ್ನುತ್ತಿದ್ದರು
ಕಳ್ಳಿನ ಭಾಂಡಿ ಕುಡಿಯುತ್ತಿದ್ದರು
ಕುಡಿದು ಢರ್ರನೆ ತೇಗುತಿದ್ದರು
ದೊಡ್ಡದಾಗಿ ನಗುತಿದ್ದರು
ಅವರು ಚೀನಾ ದೇಶದಿಂದ
ಸಿಡಿಮದ್ದನ್ನು ತಂದರು
ಕುದುರೆಗಳ ಮೇಲೆ ಬಂದರು

ಸಂತೆಗೆಂದು ಹೋದ ದೋಣಿಗಳು
ಸಂಜೆಯಾದರೂ ಮರಳಲಿಲ್ಲ
ನಗರದ ಬಾಗಿಲುಗಳು
ಹೊತ್ತಿಗೆ ಮೊದಲೇ ಮುಚ್ಚಿದುವು
ದೀಪಗಳೂ ಆರಿದುವು
ಯಾವಾಗಲೂ ಹಾಡುತಿದ್ದವರು
ಯಾಕೆ ಹಾಡಲಿಲ್ಲ?
ಮತ್ತೆ ಬೆಳಗಾಯಿತು?
ವರ್ಷಗಳು ಉರುಳಿದುವೆ?
ಯಾರಾದರೂ ಸುದ್ದಿಯನು ತಂದರೆ?
ಮೆಸಪೊಟೇಮಿಯಾ!
ಹರಿವ ನೀರಿನಲಿ
ಕೆತ್ತಿರುವುದೆ ಚರಿತ್ರೆ?
ಹೇಳೀಗ ನಮ್ಮ ಮೆಚ್ಚಿನ ಅಖಿಟೋಪನೆಲ್ಲಿ?
ಎಲ್ಲಿ ಆ ಮಂತ್ರಗಳು
ಹೆಸರು ಬರೆಸಿದ ಗ್ರಂಥಗಳು
ಎಲ್ಲಿ ಕುದುರೆಗಳು ಎಲ್ಲಿ ಕಪ್ಪೆಗಳು
ಎಲ್ಲಿ ಆ ಹೆಬ್ಬಂಡೆ
ಸಿಡಿದ ನದಿ ದಂಡೆ
ಅನೇಕ ಸೂರ್ಯರ ತಾಪ
ಅಖಿಟೋಪ
ಯಾವ ಸಮುದ್ರದಲಿ ಬಿದ್ದ
ಹೇಳು ಮೆಸಪೊಟೇಮಿಯಾ
ಅಂಥ ಪತನಕ್ಕೆ
ಇಂಥ ಸಾಲುಗಳು ಸಾಕೆ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...